<p class="title"><strong>ಪಟ್ನಾ/ಸಾರಣ್:</strong> ಬಿಹಾರದ ಸಾರಣ್ ಜಿಲ್ಲೆಯಲ್ಲಿ ಸಂಭವಿಸಿದ ಕಳ್ಳಬಟ್ಟಿ ಸಾರಾಯಿ ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="title">‘ಒಟ್ಟು 38 ಮಂದಿಯ ಸಾವಿಗೆ ಕಾರಣವಾಗಿದ್ದ ಈ ಘಟನೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ವಿಶೇಷ ಪೊಲೀಸ್ ತನಿಖಾ ತಂಡವು, ದುರಂತದ ‘ಮಾಸ್ಟರ್ ಮೈಂಡ್’ ಎನ್ನಲಾದ ಪ್ರಮುಖ ಆರೋಪಿ ಹೋಮಿಯೋಪಥಿ ಕಾಂಪೌಂಡರ್ನನ್ನು ಬಂಧಿಸಿದೆ’ ಎಂದು ಸಾರಣ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಮಾಹಿತಿ ನೀಡಿದ್ದಾರೆ.</p>.<p class="title">‘ಉತ್ತರಪ್ರದೇಶದಿಂದ ರಾಸಾಯನಿಕಗಳನ್ನು ಸಾಗಿಸಲು ಹಾಗೂ ಸಾರಣ್ ಜಿಲ್ಲೆಗೆ ಸಾರಾಯಿಯನ್ನು ಸರಬರಾಜು ಮಾಡಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ನಕಲಿ ಮದ್ಯವನ್ನು ತಯಾರಿಸಲು ಬಳಸಲಾಗಿದ್ದ ರಾಸಾಯನಿಕಗಳ ಖಾಲಿ ಬಾಟಲಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.</p>.<p class="title">ಈ ಹಿಂದೆ ಘಟನೆಗೆ ಸಂಬಂಧಿಸಿದಂತೆ ಎಸ್ಐಟಿ ಒಂಬತ್ತು ಜನರನ್ನು ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪಟ್ನಾ/ಸಾರಣ್:</strong> ಬಿಹಾರದ ಸಾರಣ್ ಜಿಲ್ಲೆಯಲ್ಲಿ ಸಂಭವಿಸಿದ ಕಳ್ಳಬಟ್ಟಿ ಸಾರಾಯಿ ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="title">‘ಒಟ್ಟು 38 ಮಂದಿಯ ಸಾವಿಗೆ ಕಾರಣವಾಗಿದ್ದ ಈ ಘಟನೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ವಿಶೇಷ ಪೊಲೀಸ್ ತನಿಖಾ ತಂಡವು, ದುರಂತದ ‘ಮಾಸ್ಟರ್ ಮೈಂಡ್’ ಎನ್ನಲಾದ ಪ್ರಮುಖ ಆರೋಪಿ ಹೋಮಿಯೋಪಥಿ ಕಾಂಪೌಂಡರ್ನನ್ನು ಬಂಧಿಸಿದೆ’ ಎಂದು ಸಾರಣ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಮಾಹಿತಿ ನೀಡಿದ್ದಾರೆ.</p>.<p class="title">‘ಉತ್ತರಪ್ರದೇಶದಿಂದ ರಾಸಾಯನಿಕಗಳನ್ನು ಸಾಗಿಸಲು ಹಾಗೂ ಸಾರಣ್ ಜಿಲ್ಲೆಗೆ ಸಾರಾಯಿಯನ್ನು ಸರಬರಾಜು ಮಾಡಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ನಕಲಿ ಮದ್ಯವನ್ನು ತಯಾರಿಸಲು ಬಳಸಲಾಗಿದ್ದ ರಾಸಾಯನಿಕಗಳ ಖಾಲಿ ಬಾಟಲಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.</p>.<p class="title">ಈ ಹಿಂದೆ ಘಟನೆಗೆ ಸಂಬಂಧಿಸಿದಂತೆ ಎಸ್ಐಟಿ ಒಂಬತ್ತು ಜನರನ್ನು ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>