<p><strong>ಪಟ್ನಾ</strong>: ಬಿಹಾರದ ನೂತನ ಶಾಸಕರಿಗೆ ಸೋಮವಾರ ಪ್ರಮಾಣ ವಚನ ಬೋಧಿಸಲಾಗಿದ್ದು, ಈ ವೇಳೆ ಉರ್ದು ಶಪಥದಲ್ಲಿದ್ದ 'ಹಿಂದೂಸ್ತಾನ್' ಎಂಬ ಪದ ಬದಲಿಸಿ 'ಭಾರತ್' ಎಂದು ಮಾಡುವಂತೆ ಎಐಎಂಐಎಂ ಶಾಸಕ ಒತ್ತಾಯಿಸಿದ್ದಾರೆ.</p>.<p>ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಖ್ತರುಲ್ ಇಮಾನ್ ಅವರು ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಲು ಎದ್ದು ನಿಲ್ಲುತ್ತಲೇ ಈ ಬೇಡಿಕೆ ಇಟ್ಟರು. ಅಖ್ತರುಲ್ ಅವರ ಬೇಡಿಕೆಯನ್ನು ಕಂಡು ಆಶ್ಚರ್ಯಗೊಂಡ ಹಂಗಾಮಿ ಸ್ಪೀಕರ್ ಜಿತನ್ ರಾಮ್ ಮಾಂಜಿ, 'ಈ ವರೆಗೆ ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದವರು ಹಿಂದೂಸ್ತಾನ್ ಎಂದೇ ಹೇಳಿದ್ದಾರೆ,' ಎಂದು ತಿಳಿಸಿದರು.</p>.<p>ಆದರೂ, 'ಹಿಂದೂಸ್ತಾನ' ಎಂಬುದರ ಬದಲಿಗೆ 'ಭಾರತ್' ಎಂದು ಹೇಳಲು ಸ್ಪೀಕರ್ ನಂತರ ಅವಕಾಶ ಕಲ್ಪಿಸಿಕೊಟ್ಟರು. ಹಿಂದೂಸ್ತಾನ ಎಂಬುದರ ಬಗ್ಗೆ ಇದ್ದ ಆಕ್ಷೇಪಣೆ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಖ್ತರುಲ್, ' ನಾನು ಯಾವುದೇ ಆಕ್ಷೇಪಣೆ ವ್ಯಕ್ತಪಡಿಸಿಲ್ಲ,' ಎಂದು ಹೇಳಿದರು.</p>.<p>'ನಾವು ಯಾವುದೇ ಭಾಷೆಯಲ್ಲಿ ಸಂವಿಧಾನದ ಮುನ್ನುಡಿಯನ್ನು ಓದಿದರೂ, ಅಲ್ಲಿ ಭಾರತ್ ಎಂಬ ಪದವನ್ನು ಉಲ್ಲೇಖಿಸಲಾಗಿರುತ್ತದೆ. ಇದನ್ನೇ ನಾನು ಸರಳವಾಗಿ ಹೇಳಿದ್ದೇನೆ. ನಾವು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿರುವುದರಿಂದ ಈ ವಿಷಯ ತಿಳಿಸಿದ್ದೇನೆ,' ಎಂದು ಅವರು ಸ್ಪಷ್ಟಪಡಿಸಿದರು.</p>.<p>ಈ ಕುರಿತು ಮಾತನಾಡಿರುವ ಆಡಳಿತ ಪಕ್ಷ ಜೆಡಿಯು ಶಾಸಕ ಮದನ್ ಸಹ್ನಿ, 'ಹಿಂದುಸ್ತಾನ ಎಂಬ ಪದ ಸಾಮಾನ್ಯವಾಗಿ ಎಲ್ಲೆಡೆ ಬಳಸುವಂಥದ್ದು. ಈ ವಿಚಾರದಲ್ಲಿ ಅನಗತ್ಯ ವಿವಾದ ಸೃಷ್ಟಿ ಮಾಡುವ ಮೂಲಕ ಕೆಲವರು ತಾವು ಪ್ರತ್ಯೇಕ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಾರೆ,' ಎಂದು ಹೇಳಿದ್ದಾರೆ.</p>.<p>ಬಿಜೆಪಿ ಶಾಸಕ ನೀರಜ್ ಸಿಂಗ್ ಬಬ್ಲು, ' ಹಿಂದೂಸ್ತಾನ್ ಎಂಬ ಪದದಲ್ಲಿ ಯಾರಿಗಾದರೂ ಆಕ್ಷೇಪಣೆಗಳಿದ್ದರೆ ಅವರು ಪಾಕಿಸ್ತಾನಕ್ಕೆ ಹೋಗಲಿ,' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರದ ನೂತನ ಶಾಸಕರಿಗೆ ಸೋಮವಾರ ಪ್ರಮಾಣ ವಚನ ಬೋಧಿಸಲಾಗಿದ್ದು, ಈ ವೇಳೆ ಉರ್ದು ಶಪಥದಲ್ಲಿದ್ದ 'ಹಿಂದೂಸ್ತಾನ್' ಎಂಬ ಪದ ಬದಲಿಸಿ 'ಭಾರತ್' ಎಂದು ಮಾಡುವಂತೆ ಎಐಎಂಐಎಂ ಶಾಸಕ ಒತ್ತಾಯಿಸಿದ್ದಾರೆ.</p>.<p>ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಖ್ತರುಲ್ ಇಮಾನ್ ಅವರು ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಲು ಎದ್ದು ನಿಲ್ಲುತ್ತಲೇ ಈ ಬೇಡಿಕೆ ಇಟ್ಟರು. ಅಖ್ತರುಲ್ ಅವರ ಬೇಡಿಕೆಯನ್ನು ಕಂಡು ಆಶ್ಚರ್ಯಗೊಂಡ ಹಂಗಾಮಿ ಸ್ಪೀಕರ್ ಜಿತನ್ ರಾಮ್ ಮಾಂಜಿ, 'ಈ ವರೆಗೆ ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದವರು ಹಿಂದೂಸ್ತಾನ್ ಎಂದೇ ಹೇಳಿದ್ದಾರೆ,' ಎಂದು ತಿಳಿಸಿದರು.</p>.<p>ಆದರೂ, 'ಹಿಂದೂಸ್ತಾನ' ಎಂಬುದರ ಬದಲಿಗೆ 'ಭಾರತ್' ಎಂದು ಹೇಳಲು ಸ್ಪೀಕರ್ ನಂತರ ಅವಕಾಶ ಕಲ್ಪಿಸಿಕೊಟ್ಟರು. ಹಿಂದೂಸ್ತಾನ ಎಂಬುದರ ಬಗ್ಗೆ ಇದ್ದ ಆಕ್ಷೇಪಣೆ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಖ್ತರುಲ್, ' ನಾನು ಯಾವುದೇ ಆಕ್ಷೇಪಣೆ ವ್ಯಕ್ತಪಡಿಸಿಲ್ಲ,' ಎಂದು ಹೇಳಿದರು.</p>.<p>'ನಾವು ಯಾವುದೇ ಭಾಷೆಯಲ್ಲಿ ಸಂವಿಧಾನದ ಮುನ್ನುಡಿಯನ್ನು ಓದಿದರೂ, ಅಲ್ಲಿ ಭಾರತ್ ಎಂಬ ಪದವನ್ನು ಉಲ್ಲೇಖಿಸಲಾಗಿರುತ್ತದೆ. ಇದನ್ನೇ ನಾನು ಸರಳವಾಗಿ ಹೇಳಿದ್ದೇನೆ. ನಾವು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿರುವುದರಿಂದ ಈ ವಿಷಯ ತಿಳಿಸಿದ್ದೇನೆ,' ಎಂದು ಅವರು ಸ್ಪಷ್ಟಪಡಿಸಿದರು.</p>.<p>ಈ ಕುರಿತು ಮಾತನಾಡಿರುವ ಆಡಳಿತ ಪಕ್ಷ ಜೆಡಿಯು ಶಾಸಕ ಮದನ್ ಸಹ್ನಿ, 'ಹಿಂದುಸ್ತಾನ ಎಂಬ ಪದ ಸಾಮಾನ್ಯವಾಗಿ ಎಲ್ಲೆಡೆ ಬಳಸುವಂಥದ್ದು. ಈ ವಿಚಾರದಲ್ಲಿ ಅನಗತ್ಯ ವಿವಾದ ಸೃಷ್ಟಿ ಮಾಡುವ ಮೂಲಕ ಕೆಲವರು ತಾವು ಪ್ರತ್ಯೇಕ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಾರೆ,' ಎಂದು ಹೇಳಿದ್ದಾರೆ.</p>.<p>ಬಿಜೆಪಿ ಶಾಸಕ ನೀರಜ್ ಸಿಂಗ್ ಬಬ್ಲು, ' ಹಿಂದೂಸ್ತಾನ್ ಎಂಬ ಪದದಲ್ಲಿ ಯಾರಿಗಾದರೂ ಆಕ್ಷೇಪಣೆಗಳಿದ್ದರೆ ಅವರು ಪಾಕಿಸ್ತಾನಕ್ಕೆ ಹೋಗಲಿ,' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>