‘ತಮ್ಮ ಪಕ್ಷವು ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿದೆ‘ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಒವೈಸಿ, ’ನಾವು ರಾಜಕೀಯ ಪಕ್ಷವನ್ನು ನಡೆಸುತ್ತಿದ್ದೇವೆ. ನಾವು ಎಲ್ಲಿ ಸ್ವಂತವಾಗಿ ಸ್ಪರ್ಧಿಸುವ ಹಕ್ಕನ್ನು ಪಡೆದಿದ್ದೇವೆ‘ ಎಂದು ಹೇಳಿದರು. ‘ನೀವು ಮಾತ್ರ ಮಹಾರಾಷ್ಟ್ರದಲ್ಲಿ ಶಿವಸೇನಾ ಮಡಿಲಲ್ಲಿ ಕುಳಿತುಕೊಂಡು ಅಧಿಕಾರ ನಡೆಸಬಾರದು. ನಾವು ಚುನಾವಣೆಗೆ ಹೋಗಬಾರದಾ‘ ಎಂದು ಪರೋಕ್ಷವಾಗಿ ಕಾಂಗ್ರೆಸ್ ಹೆಸರು ಪ್ರಸ್ತಾಪಿಸದೇ, ಅಸಾದುದ್ದೀನ್ ಪ್ರತಿಕ್ರಿಯಿಸಿದರು.