ಬಿಹಾರ ಮತ್ತು ಜಾರ್ಖಂಡ್ ಸೇರಿದಂತೆ ಆರು ರಾಜ್ಯಗಳಲ್ಲಿ ಎಸಗಲಾಗಿದ್ದ 500ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಈತ ಬೇಕಾಗಿದ್ದ. ಗಯಾದ ಅನುಗ್ರಹ ನಾರಾಯಣ್ ವೈದ್ಯಕೀಯ ಕಾಲೇಜಿನಲ್ಲಿ, ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಶವಪರೀಕ್ಷೆ ನಡೆಸಲಾಯಿತು. ಈ ಪ್ರಕ್ರಿಯೆಯನ್ನು ಚಿತ್ರೀಕರಿಸಲಾಗಿದೆ ಎಂದು ಗಯಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹರ್ಪ್ರೀತ್ ಕೌರ್ ಹೇಳಿದ್ದಾರೆ.