<p><strong>ಗಯಾ (ಬಿಹಾರ):</strong> ನಕ್ಸಲ್ ಕಮಾಂಡರ್ ಆಗಿದ್ದ ಸಂದೀಪ್ ಯಾದವ್ ಅವರ ಶವವನ್ನು ಗಯಾ ಜಿಲ್ಲೆಯ ಬಂಕೆಬಜಾರ್ ಗ್ರಾಮದಲ್ಲಿ ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಂದೀಪ್ ಯಾದವ್ ತಲೆಗೆ ವಿವಿಧ ರಾಜ್ಯ ಸರ್ಕಾರಗಳು ₹83 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದವು.</p>.<p>ಲುಟುವಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾದವ್ ಶವವಾಗಿ ಬುಧವಾರ ಪತ್ತೆಯಾಗಿದ್ದಾರೆ. ಯಾದವ್ ಸಾವನ್ನು ಪೊಲೀಸರು ಗುರುವಾರ ಖಚಿತಪಡಿಸಿದ್ದಾರೆ.</p>.<p>ಬಿಹಾರ ಮತ್ತು ಜಾರ್ಖಂಡ್ ಸೇರಿದಂತೆ ಆರು ರಾಜ್ಯಗಳಲ್ಲಿ ಎಸಗಲಾಗಿದ್ದ 500ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಈತ ಬೇಕಾಗಿದ್ದ. ಗಯಾದ ಅನುಗ್ರಹ ನಾರಾಯಣ್ ವೈದ್ಯಕೀಯ ಕಾಲೇಜಿನಲ್ಲಿ, ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಶವಪರೀಕ್ಷೆ ನಡೆಸಲಾಯಿತು. ಈ ಪ್ರಕ್ರಿಯೆಯನ್ನು ಚಿತ್ರೀಕರಿಸಲಾಗಿದೆ ಎಂದು ಗಯಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹರ್ಪ್ರೀತ್ ಕೌರ್ ಹೇಳಿದ್ದಾರೆ.</p>.<p>ಯಾದವ್ ಕಳೆದ 25 ವರ್ಷಗಳಿಂದ ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದನು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಯಾ (ಬಿಹಾರ):</strong> ನಕ್ಸಲ್ ಕಮಾಂಡರ್ ಆಗಿದ್ದ ಸಂದೀಪ್ ಯಾದವ್ ಅವರ ಶವವನ್ನು ಗಯಾ ಜಿಲ್ಲೆಯ ಬಂಕೆಬಜಾರ್ ಗ್ರಾಮದಲ್ಲಿ ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಂದೀಪ್ ಯಾದವ್ ತಲೆಗೆ ವಿವಿಧ ರಾಜ್ಯ ಸರ್ಕಾರಗಳು ₹83 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದವು.</p>.<p>ಲುಟುವಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾದವ್ ಶವವಾಗಿ ಬುಧವಾರ ಪತ್ತೆಯಾಗಿದ್ದಾರೆ. ಯಾದವ್ ಸಾವನ್ನು ಪೊಲೀಸರು ಗುರುವಾರ ಖಚಿತಪಡಿಸಿದ್ದಾರೆ.</p>.<p>ಬಿಹಾರ ಮತ್ತು ಜಾರ್ಖಂಡ್ ಸೇರಿದಂತೆ ಆರು ರಾಜ್ಯಗಳಲ್ಲಿ ಎಸಗಲಾಗಿದ್ದ 500ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಈತ ಬೇಕಾಗಿದ್ದ. ಗಯಾದ ಅನುಗ್ರಹ ನಾರಾಯಣ್ ವೈದ್ಯಕೀಯ ಕಾಲೇಜಿನಲ್ಲಿ, ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಶವಪರೀಕ್ಷೆ ನಡೆಸಲಾಯಿತು. ಈ ಪ್ರಕ್ರಿಯೆಯನ್ನು ಚಿತ್ರೀಕರಿಸಲಾಗಿದೆ ಎಂದು ಗಯಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹರ್ಪ್ರೀತ್ ಕೌರ್ ಹೇಳಿದ್ದಾರೆ.</p>.<p>ಯಾದವ್ ಕಳೆದ 25 ವರ್ಷಗಳಿಂದ ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದನು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>