ಇವರೆಲ್ಲರೂ ದುರ್ವಾಗ್ರಾಮದ ವ್ಯಾಪ್ತಿಯಲ್ಲಿ ಮೃತಪಟ್ಟಿದ್ದಾರೆ. ಗುರುವಾರ ಹಾಗೂ ಶುಕ್ರವಾರದಂದು ತಲಾ ಎಂಟು ಮಂದಿ ಸಾವಿಗೀಡಾಗಿದ್ದಾರೆ.
ಕಳ್ಳಭಟ್ಟಿ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ 36 ವರ್ಷದ ಮುಮ್ತಾಜ್ ಮಿಯಾನ್ ಸಂಬಂಧಿಕರ ದೂರಿನ ಅನ್ವಯ ಶಂಕಿತ ಆರೋಪಿ ಸುಮಿತ್ (22) ಸೇರಿದಂತೆ ಐವರನ್ನು ಬಂಧಿಸಲಾಗಿದೆ.
2016ರಲ್ಲಿ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರವು ಮದ್ಯ ಮಾರಾಟ ಹಾಗೂ ಬಳಕೆಯ ಮೇಲೆ ಸಂಪೂರ್ಣ ನಿಷೇಧವನ್ನುಹೇರಿತ್ತು.