ಪಟ್ನಾ: ತಮ್ಮ ಟೀಕೆಗಳ ಮೂಲಕ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮುಜುಗರವುಂಟು ಮಾಡಿದ್ದ ಕೃಷಿ ಸಚಿವ ಸುಧಾಕರ್ ಸಿಂಗ್ ಅವರು ಶನಿವಾರ ರಾಜೀನಾಮೆ ನೀಡಿದ್ದಾರೆ. ಈ ವಿಷಯವನ್ನು ಆರ್ಜೆಡಿಯ ರಾಜ್ಯ ಘಟಕದ ಅಧ್ಯಕ್ಷ ಮತ್ತು ಸುಧಾಕರ್ ಸಿಂಗ್ ಅವರ ತಂದೆ, ಜಗದಾನಂದ್ ಸಿಂಗ್ ಅವರು ಖಚಿತಪಡಿಸಿದ್ದಾರೆ.