ಅತ್ಯಾಚಾರಿಗಳ ಬಿಡುಗಡೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ರಚಿಸಲಾಗಿದ್ದ ಸಮಿತಿಯಲ್ಲಿ ರವುಲಜಿ, ‘ಅವರು ಅಪರಾಧ ಎಸಗಿದ್ದಾರೋ, ಇಲ್ಲವೋ ನನಗೆ ಗೊತ್ತಿಲ್ಲ. ಅಪರಾಧ ಎಸಗಲು ಒಂದು ಉದ್ದೇಶ ಇರುತ್ತದೆ. ಉತ್ತಮ ಸಂಸ್ಕಾರವಂತರು ಎಂಬುದಾಗಿ ಬ್ರಾಹ್ಮಣರು ಗುರುತಿಸಿಕೊಂಡಿದ್ದಾರೆ. ಬಿಲ್ಕಿಸ್ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ಈಗ ಬಿಡುಗಡೆಯಾದವರು ಬ್ರಾಹ್ಮಣ ಸಮುದಾಯದವರು. ಅವರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಯಾರೋ ದುರುದ್ದೇಶ ಹೊಂದಿದ್ದಂತೆ ತೋರುತ್ತಿದೆ’ಎಂದಿದ್ದರು.