ಪೆಗಾಸಸ್ ಬೇಹುಗಾರಿಕೆ ವಿವಾದದ ತನಿಖೆಗೆ ಮತ್ತು ಮೂರು ಕೃಷಿ ಕಾಯ್ದೆ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ಕೋಲಾಹಲ ಸೃಷ್ಟಿಸಿದ ನಡುವೆಯೂ ರಕ್ಷಣಾ ರಾಜ್ಯ ಸಚಿವ ಅಜಯ್ ಭಟ್ ಅವರು ಅಗತ್ಯ ರಕ್ಷಣಾ ಸೇವೆಗಳ ಮಸೂದೆ 2021 ಅನ್ನು ಸದನದ ಮುಂದಿಟ್ಟರು. ಜೂನ್ನಲ್ಲಿ ಹೊರಡಿಸಿದ್ದ ಸುಗ್ರೀವಾಜ್ಞೆಯ ಬದಲಿಗೆ ಈ ಮಸೂದೆಯನ್ನು ಸರ್ಕಾರ ತರಲು ಉದ್ದೇಶಿಸಿದೆ.