<p><strong>ಚೆನ್ನೈ</strong>: ಆನ್ಲೈನ್ ಜೂಜಾಟಕ್ಕೆ ನಿಷೇಧ ಹೇರುವ ಮಸೂದೆಯನ್ನು ತಮಿಳುನಾಡು ವಿಧಾನಸಭೆಯಲ್ಲಿ ಗುರುವಾರ ಮತ್ತೊಮ್ಮೆ ಸರ್ವಾನುಮತದಿಂದ ಅಂಗೀಕರಿಸಲಾಯಿತು.</p>.<p>ರಾಜ್ಯಪಾಲ ಆರ್. ಎನ್. ರವಿ ಅವರು, ಮಸೂದೆಯನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ವಾಪಸ್ ಕಳುಹಿಸಿದ ಹಿನ್ನೆಲೆಯಲ್ಲಿ ಮತ್ತೆ ಅಂಗೀಕರಿಸಲಾಯಿತು.</p>.<p>ಮಸೂದೆಯನ್ನು ಮಂಡಿಸಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ಆನ್ಲೈನ್ ಜೂಜಾಟಕ್ಕೆ ಬಲಿಯಾದವರನ್ನು ಉಲ್ಲೇಖಿಸಿದರು.</p>.<p>ಆನ್ಲೈನ್ ಜೂಜಾಟದಿಂದ ಹಣ ಕಳೆದುಕೊಂಡು ಹಲವು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೂ ಹೇಳಿದರು.</p>.<p>ಮಸೂದೆಯನ್ನು ಬೆಂಬಲಿಸಿ ಹಾಗೂ ರಾಜ್ಯಪಾಲರ ನಡೆಗೆ ವಿರೋಧ ವ್ಯಕ್ತಪಡಿಸಿ ಹಲವು ಮಂದಿ ಸದಸ್ಯರು ಮಾತನಾಡಿದರು.</p>.<p>ಬಳಿಕ ಸಭಾಧ್ಯಕ್ಷ ಎಂ.ಅಪ್ಪಾವು ಅವರು ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿರುವುದಾಗಿ ಘೋಷಿಸಿದರು.</p>.<p>ವಿರೋಧ ಪಕ್ಷ ಎಐಎಡಿಎಂಕೆ ನಾಯಕತ್ವದ ಒಡಕು ಇದೇ ವೇಳೆ ಸದನದಲ್ಲಿ ಬಹಿರಂಗಗೊಂಡಿತು. ಉಚ್ಚಾಟಿತ ಮುಖಂಡ ಒ. ಪನ್ನೀರ್ಸೆಲ್ವಂ ಅವರಿಗೆ ಸಭಾಧ್ಯಕ್ಷರು ಮಾತನಾಡಲು ಅನುಮತಿ ನೀಡಿದ್ದಕ್ಕೆ ವಿರೋಧ ಪಕ್ಷದ ನಾಯಕ ಕೆ.ಪಳನಿಸ್ವಾಮಿ ಮತ್ತು ಎಐಎಡಿಎಂಕೆಯ ಕೆಲವು ಶಾಸಕರು ವಿರೋಧ ವ್ಯಕ್ತಪಡಿಸಿದರು.</p>.<p>ಪನ್ನೀರ್ಸೆಲ್ವಂ ಅವರಿಗೆ ಎಐಎಡಿಎಂಕೆ ಸದಸ್ಯ ಎನ್ನುವ ಕಾರಣಕ್ಕೆ ಮಾತನಾಡಲು ಅನುಮತಿ ನೀಡಿಲ್ಲ. ಅವರು ಮಾಜಿ ಮುಖ್ಯಮಂತ್ರಿಗಳಾಗಿರುವುದರಿಂದ ನೀಡಲಾಗಿದೆ ಎಂದು ಸಭಾಧ್ಯಕ್ಷರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಆನ್ಲೈನ್ ಜೂಜಾಟಕ್ಕೆ ನಿಷೇಧ ಹೇರುವ ಮಸೂದೆಯನ್ನು ತಮಿಳುನಾಡು ವಿಧಾನಸಭೆಯಲ್ಲಿ ಗುರುವಾರ ಮತ್ತೊಮ್ಮೆ ಸರ್ವಾನುಮತದಿಂದ ಅಂಗೀಕರಿಸಲಾಯಿತು.</p>.<p>ರಾಜ್ಯಪಾಲ ಆರ್. ಎನ್. ರವಿ ಅವರು, ಮಸೂದೆಯನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ವಾಪಸ್ ಕಳುಹಿಸಿದ ಹಿನ್ನೆಲೆಯಲ್ಲಿ ಮತ್ತೆ ಅಂಗೀಕರಿಸಲಾಯಿತು.</p>.<p>ಮಸೂದೆಯನ್ನು ಮಂಡಿಸಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ಆನ್ಲೈನ್ ಜೂಜಾಟಕ್ಕೆ ಬಲಿಯಾದವರನ್ನು ಉಲ್ಲೇಖಿಸಿದರು.</p>.<p>ಆನ್ಲೈನ್ ಜೂಜಾಟದಿಂದ ಹಣ ಕಳೆದುಕೊಂಡು ಹಲವು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೂ ಹೇಳಿದರು.</p>.<p>ಮಸೂದೆಯನ್ನು ಬೆಂಬಲಿಸಿ ಹಾಗೂ ರಾಜ್ಯಪಾಲರ ನಡೆಗೆ ವಿರೋಧ ವ್ಯಕ್ತಪಡಿಸಿ ಹಲವು ಮಂದಿ ಸದಸ್ಯರು ಮಾತನಾಡಿದರು.</p>.<p>ಬಳಿಕ ಸಭಾಧ್ಯಕ್ಷ ಎಂ.ಅಪ್ಪಾವು ಅವರು ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿರುವುದಾಗಿ ಘೋಷಿಸಿದರು.</p>.<p>ವಿರೋಧ ಪಕ್ಷ ಎಐಎಡಿಎಂಕೆ ನಾಯಕತ್ವದ ಒಡಕು ಇದೇ ವೇಳೆ ಸದನದಲ್ಲಿ ಬಹಿರಂಗಗೊಂಡಿತು. ಉಚ್ಚಾಟಿತ ಮುಖಂಡ ಒ. ಪನ್ನೀರ್ಸೆಲ್ವಂ ಅವರಿಗೆ ಸಭಾಧ್ಯಕ್ಷರು ಮಾತನಾಡಲು ಅನುಮತಿ ನೀಡಿದ್ದಕ್ಕೆ ವಿರೋಧ ಪಕ್ಷದ ನಾಯಕ ಕೆ.ಪಳನಿಸ್ವಾಮಿ ಮತ್ತು ಎಐಎಡಿಎಂಕೆಯ ಕೆಲವು ಶಾಸಕರು ವಿರೋಧ ವ್ಯಕ್ತಪಡಿಸಿದರು.</p>.<p>ಪನ್ನೀರ್ಸೆಲ್ವಂ ಅವರಿಗೆ ಎಐಎಡಿಎಂಕೆ ಸದಸ್ಯ ಎನ್ನುವ ಕಾರಣಕ್ಕೆ ಮಾತನಾಡಲು ಅನುಮತಿ ನೀಡಿಲ್ಲ. ಅವರು ಮಾಜಿ ಮುಖ್ಯಮಂತ್ರಿಗಳಾಗಿರುವುದರಿಂದ ನೀಡಲಾಗಿದೆ ಎಂದು ಸಭಾಧ್ಯಕ್ಷರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>