ಬೋಗ್ತುಯಿಯಲ್ಲಿ ಮೃತ ಭದು ಶೇಖ್ ಹಾಗೂ ಪಾಲಾಶ್ ಶೇಖ್, ಸೋನಾ ಶೇಖ್ ಎಂಬುವವರ ಎರಡು ಗುಂಪುಗಳ ನಡುವೆ ದೀರ್ಘಕಾಲದ ವೈರತ್ವವಿತ್ತು. ಸ್ಥಳೀಯ ಪ್ರಾಬಲ್ಯ, ವಾಣಿಜ್ಯ ವಾಹನಗಳಿಂದ ಸಂಗ್ರಹಿಸಲಾಗುವ ಅಕ್ರಮ ಹಣ, ಇತರ ಕಾನೂನುಬಾಹಿರ ಚಟುವಟಿಕೆಗಳಿಂದ ಬರುವ ಆದಾಯದ ಮೇಲಿನ ನಿಯಂತ್ರಣಕ್ಕಾಗಿ ಈ ಗುಂಪುಗಳ ನಡುವೆ ವೈರತ್ವ ಮನೆ ಮಾಡಿತ್ತು ಎಂದು ಸಿಬಿಐ ಹೇಳಿದೆ.