<p><strong>ಬಿರ್ಭೂಮ್</strong>:ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿರ್ಭೂಮ್ ಹಿಂಸಾಚಾರ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೌಕರಿ ಪ್ರಮಾಣ ಪತ್ರಗಳನ್ನು ಸೋಮವಾರ ವಿತರಿಸಿದ್ದಾರೆ.</p>.<p>ಘಟನೆಯಲ್ಲಿ ಮೃತಪಟ್ಟಿದ್ದ 10 ಜನರ ಕುಟುಂಬಗಳಲ್ಲಿನ ತಲಾ ಒಬ್ಬರಿಗೆ ಸರ್ಕಾರಿ ನೌಕರಿಯನ್ನು ಪಶ್ಚಿಮ ಬಂಗಾಳ ಸರ್ಕಾರ ನೀಡಿದೆ.</p>.<p>ಮಾರ್ಚ್ 22ರಂದು ಬಿರ್ಭೂಮ್ ಜಿಲ್ಲೆಯ ರಾಮ್ಪುರಹಾಟ್ನ ಟಿಎಂಸಿ ಪಂಚಾಯಿತಿ ಸದಸ್ಯನ ಹತ್ಯೆ ನಡೆದಿತ್ತು. ಅದರ ಬೆನ್ನಲ್ಲೇ ಪಕ್ಕದ ಬೋಗ್ತುಇ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಕೃತ್ಯದಲ್ಲಿ 9 ಜನರು ಜೀವಂತವಾಗಿ ಸುಟ್ಟುಹಾಕಲಾಗಿತ್ತು. ಗಾಯಗೊಂಡಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ವರದಿಯಾಗಿತ್ತು.</p>.<p>ಕಲ್ಕತ್ತ ಹೈಕೋರ್ಟ್ನ ಆದೇಶದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ತನಿಖೆ ನಡೆಸುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ಎಸ್ಐಟಿ ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿತ್ತು.</p>.<p>ಇನ್ನೊಂದೆಡೆ ಬಿರ್ಭೂಮ್ನಲ್ಲಿನ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸತ್ಯಶೋಧನಾ ಸಮಿತಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಸಲ್ಲಿಸಿರುವ ವರದಿಯಿಂದ ಸಿಬಿಐ ತನಿಖೆಗೆ ಅಡ್ಡಿಯಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದರು.</p>.<p><a href="https://www.prajavani.net/world-news/bidens-will-host-a-white-house-wedding-reception-for-their-granddaughter-925526.html" itemprop="url">ವೈಟ್ಹೌಸ್ನಲ್ಲಿ ಮೊಮ್ಮಗಳ ಮದುವೆ ಮಾಡಲು ಜೊ ಬೈಡನ್ ದಂಪತಿ ಭರ್ಜರಿ ಸಿದ್ದತೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿರ್ಭೂಮ್</strong>:ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿರ್ಭೂಮ್ ಹಿಂಸಾಚಾರ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೌಕರಿ ಪ್ರಮಾಣ ಪತ್ರಗಳನ್ನು ಸೋಮವಾರ ವಿತರಿಸಿದ್ದಾರೆ.</p>.<p>ಘಟನೆಯಲ್ಲಿ ಮೃತಪಟ್ಟಿದ್ದ 10 ಜನರ ಕುಟುಂಬಗಳಲ್ಲಿನ ತಲಾ ಒಬ್ಬರಿಗೆ ಸರ್ಕಾರಿ ನೌಕರಿಯನ್ನು ಪಶ್ಚಿಮ ಬಂಗಾಳ ಸರ್ಕಾರ ನೀಡಿದೆ.</p>.<p>ಮಾರ್ಚ್ 22ರಂದು ಬಿರ್ಭೂಮ್ ಜಿಲ್ಲೆಯ ರಾಮ್ಪುರಹಾಟ್ನ ಟಿಎಂಸಿ ಪಂಚಾಯಿತಿ ಸದಸ್ಯನ ಹತ್ಯೆ ನಡೆದಿತ್ತು. ಅದರ ಬೆನ್ನಲ್ಲೇ ಪಕ್ಕದ ಬೋಗ್ತುಇ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಕೃತ್ಯದಲ್ಲಿ 9 ಜನರು ಜೀವಂತವಾಗಿ ಸುಟ್ಟುಹಾಕಲಾಗಿತ್ತು. ಗಾಯಗೊಂಡಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ವರದಿಯಾಗಿತ್ತು.</p>.<p>ಕಲ್ಕತ್ತ ಹೈಕೋರ್ಟ್ನ ಆದೇಶದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ತನಿಖೆ ನಡೆಸುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ಎಸ್ಐಟಿ ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿತ್ತು.</p>.<p>ಇನ್ನೊಂದೆಡೆ ಬಿರ್ಭೂಮ್ನಲ್ಲಿನ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸತ್ಯಶೋಧನಾ ಸಮಿತಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಸಲ್ಲಿಸಿರುವ ವರದಿಯಿಂದ ಸಿಬಿಐ ತನಿಖೆಗೆ ಅಡ್ಡಿಯಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದರು.</p>.<p><a href="https://www.prajavani.net/world-news/bidens-will-host-a-white-house-wedding-reception-for-their-granddaughter-925526.html" itemprop="url">ವೈಟ್ಹೌಸ್ನಲ್ಲಿ ಮೊಮ್ಮಗಳ ಮದುವೆ ಮಾಡಲು ಜೊ ಬೈಡನ್ ದಂಪತಿ ಭರ್ಜರಿ ಸಿದ್ದತೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>