<p><strong>ನವದೆಹಲಿ: ಉ</strong>ತ್ತರ ಪ್ರದೇಶದಲ್ಲಿ ಹಕ್ಕಿಜ್ವರ ಕಾಣಸಿಕೊಂಡಿದೆ ಎಂದು ಶನಿವಾರ ಕೇಂದ್ರ ಸರ್ಕಾರ ದೃಢಪಡಿಸಿದೆ. ಇದರೊಂದಿಗೆ ದೇಶದ ಒಟ್ಟು ಏಳು ರಾಜ್ಯಗಳಲ್ಲಿ ಹಕ್ಕಿಜ್ವರ ಇರುವುದು ದೃಢಪಟ್ಟಂತಾಗಿದೆ.</p>.<p>ದೆಹಲಿ, ಮಹಾರಾಷ್ಟ್ರ ಹಾಗೂ ಛತ್ತೀಸಗಡ ರಾಜ್ಯಗಳಿಂದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ವರದಿ ಇನ್ನೂ ಬರಬೇಕು.</p>.<p>‘ಉತ್ತರ ಪ್ರದೇಶ, ಕೇರಳ, ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ ಹಾಗೂ ಗುಜರಾತ್ ರಾಜ್ಯಗಳಲ್ಲಿ ಹಕ್ಕಿಜ್ವರ ಕಂಡುಬಂದಿದೆ. ರೋಗ ಪ್ರಸರಣವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಈ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ’ ಎಂದು ಮೀನುಗಾರಿಕೆ, ಪಶುಪಾಲನೆ ಹಾಗೂ ಹೈನುಗಾರಿಕೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ರೋಗ ಪ್ರಸರಣವಾಗುವುದನ್ನು ತಡೆಯಲು ಕೈಗೊಂಡ ಕ್ರಮಗಳ ಪರಿಶೀಲನೆ, ರೋಗಗ್ರಸ್ತ ಹಕ್ಕಿಗಳ ವಿಲೇವಾರಿ ಮೇಲ್ವಿಚಾರಣೆಗಾಗಿ ಕೇರಳ ಮತ್ತು ಹಿಮಾಚಲ ಪ್ರದೇಶಗಳಿಗೆ ಕೇಂದ್ರದ ತಂಡಗಳನ್ನು ಕಳಿಸಲಾಗಿದೆ ಎಂದೂ ಸಚಿವಾಲಯ ತಿಳಿಸಿದೆ.</p>.<p>ಜಲಚರ ಜೀವಿಗಳು, ಹಕ್ಕಿಗಳ ಮಾರುಕಟ್ಟೆಗಳು, ಪ್ರಾಣಿ ಸಂಗ್ರಹಾಲಯಗಳು, ಕೋಳಿ ಸಾಕಣೆ ಕೇಂದ್ರಗಳ ಮೇಲೂ ನಿಗಾ ಇಡುವಂತೆ ಸೂಚಿಸಲಾಗಿದೆ. ರೋಗದಿಂದಾಗಿ ಸತ್ತ ಹಕ್ಕಿಗಳ ಕಳೇಬರಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆಯೂ ನಿರ್ದೇಶನ ನೀಡಲಾಗಿದೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ಉ</strong>ತ್ತರ ಪ್ರದೇಶದಲ್ಲಿ ಹಕ್ಕಿಜ್ವರ ಕಾಣಸಿಕೊಂಡಿದೆ ಎಂದು ಶನಿವಾರ ಕೇಂದ್ರ ಸರ್ಕಾರ ದೃಢಪಡಿಸಿದೆ. ಇದರೊಂದಿಗೆ ದೇಶದ ಒಟ್ಟು ಏಳು ರಾಜ್ಯಗಳಲ್ಲಿ ಹಕ್ಕಿಜ್ವರ ಇರುವುದು ದೃಢಪಟ್ಟಂತಾಗಿದೆ.</p>.<p>ದೆಹಲಿ, ಮಹಾರಾಷ್ಟ್ರ ಹಾಗೂ ಛತ್ತೀಸಗಡ ರಾಜ್ಯಗಳಿಂದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ವರದಿ ಇನ್ನೂ ಬರಬೇಕು.</p>.<p>‘ಉತ್ತರ ಪ್ರದೇಶ, ಕೇರಳ, ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ ಹಾಗೂ ಗುಜರಾತ್ ರಾಜ್ಯಗಳಲ್ಲಿ ಹಕ್ಕಿಜ್ವರ ಕಂಡುಬಂದಿದೆ. ರೋಗ ಪ್ರಸರಣವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಈ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ’ ಎಂದು ಮೀನುಗಾರಿಕೆ, ಪಶುಪಾಲನೆ ಹಾಗೂ ಹೈನುಗಾರಿಕೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ರೋಗ ಪ್ರಸರಣವಾಗುವುದನ್ನು ತಡೆಯಲು ಕೈಗೊಂಡ ಕ್ರಮಗಳ ಪರಿಶೀಲನೆ, ರೋಗಗ್ರಸ್ತ ಹಕ್ಕಿಗಳ ವಿಲೇವಾರಿ ಮೇಲ್ವಿಚಾರಣೆಗಾಗಿ ಕೇರಳ ಮತ್ತು ಹಿಮಾಚಲ ಪ್ರದೇಶಗಳಿಗೆ ಕೇಂದ್ರದ ತಂಡಗಳನ್ನು ಕಳಿಸಲಾಗಿದೆ ಎಂದೂ ಸಚಿವಾಲಯ ತಿಳಿಸಿದೆ.</p>.<p>ಜಲಚರ ಜೀವಿಗಳು, ಹಕ್ಕಿಗಳ ಮಾರುಕಟ್ಟೆಗಳು, ಪ್ರಾಣಿ ಸಂಗ್ರಹಾಲಯಗಳು, ಕೋಳಿ ಸಾಕಣೆ ಕೇಂದ್ರಗಳ ಮೇಲೂ ನಿಗಾ ಇಡುವಂತೆ ಸೂಚಿಸಲಾಗಿದೆ. ರೋಗದಿಂದಾಗಿ ಸತ್ತ ಹಕ್ಕಿಗಳ ಕಳೇಬರಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆಯೂ ನಿರ್ದೇಶನ ನೀಡಲಾಗಿದೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>