<p><strong>ತಿರುವನಂತಪುರ: </strong>ಕೋವಿಡ್–19 ಪಿಡುಗಿನ ವಿರುದ್ಧ ದೇಶ ಇನ್ನೂ ಹೋರಾಡುತ್ತಿರುವ ನಡುವೆ, ಕೆಲವು ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವುದು ಆತಂಕವನ್ನು ಹೆಚ್ಚಿಸಿದೆ.</p>.<p>ಎರಡು ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗಿರುವ ಕಾರಣ, ಕೇರಳದಲ್ಲಿ ಈ ಕಾಯಿಲೆಯನ್ನು ರಾಜ್ಯ ವಿಪತ್ತು ಎಂದು ಘೋಷಿಸಲಾಗಿದೆ.</p>.<p>ಹಿಮಾಚಲ ಪ್ರದೇಶದಲ್ಲಿ ಸೋಮವಾರ ಹಕ್ಕಿಜ್ವರದ ಪ್ರಕರಣಗಳು ವರದಿಯಾಗಿವೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಈಗಾಗಲೇ ಕಂಡುಬಂದಿವೆ. ಇದರೊಂದಿಗೆ ಒಟ್ಟು ನಾಲ್ಕು ರಾಜ್ಯಗಳಲ್ಲಿ ಈ ಕಾಯಿಲೆ ಕಾಣಿಸಿಕೊಂಡಂತಾಗಿದೆ.</p>.<p>‘ಕೇರಳದ ಅಳಪ್ಪುಳದ ಕಾರ್ತಿಪಳ್ಳಿ ಹಾಗೂ ಕುಟ್ಟನಾಡ, ಕೋಟ್ಟಯಂನ ನೀಂದೂರ್ನಲ್ಲಿ ಹಕ್ಕಿ ಜ್ವರದ ಪ್ರಕರಣಗಳು ವರದಿಯಾಗಿವೆ. ಈ ಜ್ವರದ ಪ್ರಸರಣ ತಡೆಯುವ ಸಲುವಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ’ ಎಂದು ರಾಜ್ಯ ಪಶು ಸಂಗೋಪನಾ ಇಲಾಖೆ ನಿರ್ದೇಶಕ ಡಾ.ಕೆ.ಎಂ.ದಿಲೀಪ್ ತಿಳಿಸಿದರು.</p>.<p>ಬೇರೆ ಜಿಲ್ಲೆಗಳಿಗೆ ರೋಗ ಹರಡದಂತೆ ಮಾಡಲು ಈಗಾಗಲೇ 50,000ದಷ್ಟು ಹಕ್ಕಿಗಳನ್ನು ಕೊಲ್ಲಲಾಗಿದೆ.</p>.<p>ಮುಂಜಾಗ್ರತಾ ಕ್ರಮವಾಗಿ, ಕೇರಳದಿಂದ ಕೋಳಿ ಹಾಗೂ ಮೊಟ್ಟೆಗಳನ್ನು ತರುವುದಕ್ಕೆ ತಮಿಳುನಾಡು ನಿರ್ಬಂಧ ವಿಧಿಸಿದೆ.</p>.<p>ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಪಾಂಗ್ ಅಣೆಕಟ್ಟು ಬಳಿ, ವಲಸೆ ಬಂದಿದ್ದ ಸಾವಿರಾರು ಹಕ್ಕಿಗಳು ಸತ್ತು ಬಿದ್ದಿದ್ದು, ಅವುಗಳು ಸಾವಿಗೆ ಹಕ್ಕಿ ಜ್ವರವೇ ಕಾರಣ ಎಂಬುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ: </strong>ಕೋವಿಡ್–19 ಪಿಡುಗಿನ ವಿರುದ್ಧ ದೇಶ ಇನ್ನೂ ಹೋರಾಡುತ್ತಿರುವ ನಡುವೆ, ಕೆಲವು ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವುದು ಆತಂಕವನ್ನು ಹೆಚ್ಚಿಸಿದೆ.</p>.<p>ಎರಡು ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗಿರುವ ಕಾರಣ, ಕೇರಳದಲ್ಲಿ ಈ ಕಾಯಿಲೆಯನ್ನು ರಾಜ್ಯ ವಿಪತ್ತು ಎಂದು ಘೋಷಿಸಲಾಗಿದೆ.</p>.<p>ಹಿಮಾಚಲ ಪ್ರದೇಶದಲ್ಲಿ ಸೋಮವಾರ ಹಕ್ಕಿಜ್ವರದ ಪ್ರಕರಣಗಳು ವರದಿಯಾಗಿವೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಈಗಾಗಲೇ ಕಂಡುಬಂದಿವೆ. ಇದರೊಂದಿಗೆ ಒಟ್ಟು ನಾಲ್ಕು ರಾಜ್ಯಗಳಲ್ಲಿ ಈ ಕಾಯಿಲೆ ಕಾಣಿಸಿಕೊಂಡಂತಾಗಿದೆ.</p>.<p>‘ಕೇರಳದ ಅಳಪ್ಪುಳದ ಕಾರ್ತಿಪಳ್ಳಿ ಹಾಗೂ ಕುಟ್ಟನಾಡ, ಕೋಟ್ಟಯಂನ ನೀಂದೂರ್ನಲ್ಲಿ ಹಕ್ಕಿ ಜ್ವರದ ಪ್ರಕರಣಗಳು ವರದಿಯಾಗಿವೆ. ಈ ಜ್ವರದ ಪ್ರಸರಣ ತಡೆಯುವ ಸಲುವಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ’ ಎಂದು ರಾಜ್ಯ ಪಶು ಸಂಗೋಪನಾ ಇಲಾಖೆ ನಿರ್ದೇಶಕ ಡಾ.ಕೆ.ಎಂ.ದಿಲೀಪ್ ತಿಳಿಸಿದರು.</p>.<p>ಬೇರೆ ಜಿಲ್ಲೆಗಳಿಗೆ ರೋಗ ಹರಡದಂತೆ ಮಾಡಲು ಈಗಾಗಲೇ 50,000ದಷ್ಟು ಹಕ್ಕಿಗಳನ್ನು ಕೊಲ್ಲಲಾಗಿದೆ.</p>.<p>ಮುಂಜಾಗ್ರತಾ ಕ್ರಮವಾಗಿ, ಕೇರಳದಿಂದ ಕೋಳಿ ಹಾಗೂ ಮೊಟ್ಟೆಗಳನ್ನು ತರುವುದಕ್ಕೆ ತಮಿಳುನಾಡು ನಿರ್ಬಂಧ ವಿಧಿಸಿದೆ.</p>.<p>ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಪಾಂಗ್ ಅಣೆಕಟ್ಟು ಬಳಿ, ವಲಸೆ ಬಂದಿದ್ದ ಸಾವಿರಾರು ಹಕ್ಕಿಗಳು ಸತ್ತು ಬಿದ್ದಿದ್ದು, ಅವುಗಳು ಸಾವಿಗೆ ಹಕ್ಕಿ ಜ್ವರವೇ ಕಾರಣ ಎಂಬುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>