ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಸದಸ್ಯ ಸುಧಾನ್ಶು ತ್ರಿವೇದಿ, ‘ಪ್ರಧಾನಿ ಅವರು ನೀಡಿದ್ದ ಕರೆ ಸಾಂಕೇತಿವಾಗಿತ್ತು. ಕೊರೊನಾ ನಿಯಂತ್ರಿಸುವಲ್ಲಿ ತೊಡಗಿದವರ ಆತ್ಮಸ್ಥೈರ್ಯ ಹೆಚ್ಚಿಸುವುದಾಗಿತ್ತು. ಜತೆಗೆ, ಸಂಕಷ್ಟದ ಸಂದರ್ಭದಲ್ಲಿ ದೇಶವನ್ನು ಒಗ್ಗಡಿಸುವುದಾಗಿತ್ತು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಅವರು ಚರಕ ಚಿಹ್ನೆಯನ್ನು ಬಳಸಿ ಒಗ್ಗೂಡಿಸುವ ಕಾರ್ಯ ಕೈಗೊಂಡಿದ್ದರು. ಅದೇ ಮಾದರಿಯನ್ನು ಪ್ರಧಾನಿ ಅವರು ಅನುಸರಿಸಿದ್ದಾರೆ’ ಎಂದು ಸಮರ್ಥಿಸಿಕೊಂಡರು.