<p><strong>ನವದೆಹಲಿ:</strong>ಉತ್ತರ ಪ್ರದೇಶದ ಲಖಿಂಪುರ–ಖೇರಿಯ ದುರಂತವನ್ನು ಕಾಂಗ್ರೆಸ್ ಪಕ್ಷವು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದೆ ಎಂದು ಬಿಜೆಪಿ ದೂರಿದೆ.</p>.<p>ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಜವಾಬ್ದಾರಿತನ ಎಂಬುದು ರಾಹುಲ್ ಗಾಂಧಿ ಅವರ ಪರ್ಯಾಯ ಹೆಸರಾಗಿದೆ ಎಂದು ಪಾತ್ರಾ ಟೀಕಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/congress-leaders-rahul-gandhi-flight-to-lucknow-up-permission-granted-to-visit-lakhimpur-kheri-873145.html" itemprop="url">ಲಖಿಂಪುರದತ್ತ ಕಾಂಗ್ರೆಸ್ ಮುಖಂಡರು: ರಾಹುಲ್, ಪ್ರಿಯಾಂಕಾ ಪ್ರವೇಶಕ್ಕೆ ಅನುಮತಿ</a></p>.<p>ಕಾಂಗ್ರೆಸ್ ಎಲ್ಲ ವಿಚಾರಗಳಲ್ಲಿಯೂ ಜನರನ್ನು ಹಿಂಸೆಗೆ ಪ್ರಚೋದಿಸಲು ಯತ್ನಿಸುತ್ತಿದೆ. ಶಾಂತಿ ಕಾಪಾಡುವುದಕ್ಕಾಗಿ ಪ್ರತಿಪಕ್ಷಗಳ ನಾಯಕರ ಲಖಿಂಪುರ–ಖೇರಿ ಭೇಟಿಗೆ ಸರ್ಕಾರ ಅವಕಾಶ ನೀಡಿಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.</p>.<p>ಲಖಿಂಪುರ–ಖೇರಿಗೆ ಭೇಟಿ ನೀಡಲು ಮುಂದಾಗಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದರು.</p>.<p>ದೇಶದಲ್ಲಿ ಪ್ರಜಾಪ್ರಭುತ್ವವಿಲ್ಲ. ನಿರಂಕುಶ ಪ್ರಭುತ್ವ ಇದೆ ಎಂಬ ರಾಹುಲ್ ಟೀಕೆಗೆ ಪಾತ್ರಾ ತಿರುಗೇಟು ನೀಡಿದ್ದಾರೆ. ಅವರ (ರಾಹುಲ್) ಪತ್ರಿಕಾಗೋಷ್ಠಿಗಳಿಗೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿಲ್ಲ. ಆದರೆ ಪಕ್ಷದ ಕಾರ್ಯನಿರ್ವಹಣೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಕಪಿಲ್ ಸಿಬಲ್ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/lakhimpur-kheri-violence-uttar-pradesh-congress-bjp-yogi-adityanath-priyanka-gandhi-873079.html" target="_blank">ಲಖಿಂಪುರ–ಖೇರಿ ಹಿಂಸಾಚಾರ: ಜಂಟಿ ಹೋರಾಟಕ್ಕೆ ವಿಪಕ್ಷ ಸಜ್ಜು</a></p>.<p>‘ದೇಶದಲ್ಲಿ ಪ್ರಜಾಪ್ರಭುತ್ವ ಇರುವ ಕಾರಣವೇ ನಿಮಗೆ (ರಾಹುಲ್) ಪತ್ರಿಕಾಗೋಷ್ಠಿಗಳನ್ನು ನಡೆಸುವುದು ಸಾಧ್ಯವಾಗುತ್ತಿದೆ’ ಎಂದೂ ಪಾತ್ರಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಉತ್ತರ ಪ್ರದೇಶದ ಲಖಿಂಪುರ–ಖೇರಿಯ ದುರಂತವನ್ನು ಕಾಂಗ್ರೆಸ್ ಪಕ್ಷವು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದೆ ಎಂದು ಬಿಜೆಪಿ ದೂರಿದೆ.</p>.<p>ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಜವಾಬ್ದಾರಿತನ ಎಂಬುದು ರಾಹುಲ್ ಗಾಂಧಿ ಅವರ ಪರ್ಯಾಯ ಹೆಸರಾಗಿದೆ ಎಂದು ಪಾತ್ರಾ ಟೀಕಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/congress-leaders-rahul-gandhi-flight-to-lucknow-up-permission-granted-to-visit-lakhimpur-kheri-873145.html" itemprop="url">ಲಖಿಂಪುರದತ್ತ ಕಾಂಗ್ರೆಸ್ ಮುಖಂಡರು: ರಾಹುಲ್, ಪ್ರಿಯಾಂಕಾ ಪ್ರವೇಶಕ್ಕೆ ಅನುಮತಿ</a></p>.<p>ಕಾಂಗ್ರೆಸ್ ಎಲ್ಲ ವಿಚಾರಗಳಲ್ಲಿಯೂ ಜನರನ್ನು ಹಿಂಸೆಗೆ ಪ್ರಚೋದಿಸಲು ಯತ್ನಿಸುತ್ತಿದೆ. ಶಾಂತಿ ಕಾಪಾಡುವುದಕ್ಕಾಗಿ ಪ್ರತಿಪಕ್ಷಗಳ ನಾಯಕರ ಲಖಿಂಪುರ–ಖೇರಿ ಭೇಟಿಗೆ ಸರ್ಕಾರ ಅವಕಾಶ ನೀಡಿಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.</p>.<p>ಲಖಿಂಪುರ–ಖೇರಿಗೆ ಭೇಟಿ ನೀಡಲು ಮುಂದಾಗಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದರು.</p>.<p>ದೇಶದಲ್ಲಿ ಪ್ರಜಾಪ್ರಭುತ್ವವಿಲ್ಲ. ನಿರಂಕುಶ ಪ್ರಭುತ್ವ ಇದೆ ಎಂಬ ರಾಹುಲ್ ಟೀಕೆಗೆ ಪಾತ್ರಾ ತಿರುಗೇಟು ನೀಡಿದ್ದಾರೆ. ಅವರ (ರಾಹುಲ್) ಪತ್ರಿಕಾಗೋಷ್ಠಿಗಳಿಗೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿಲ್ಲ. ಆದರೆ ಪಕ್ಷದ ಕಾರ್ಯನಿರ್ವಹಣೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಕಪಿಲ್ ಸಿಬಲ್ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/lakhimpur-kheri-violence-uttar-pradesh-congress-bjp-yogi-adityanath-priyanka-gandhi-873079.html" target="_blank">ಲಖಿಂಪುರ–ಖೇರಿ ಹಿಂಸಾಚಾರ: ಜಂಟಿ ಹೋರಾಟಕ್ಕೆ ವಿಪಕ್ಷ ಸಜ್ಜು</a></p>.<p>‘ದೇಶದಲ್ಲಿ ಪ್ರಜಾಪ್ರಭುತ್ವ ಇರುವ ಕಾರಣವೇ ನಿಮಗೆ (ರಾಹುಲ್) ಪತ್ರಿಕಾಗೋಷ್ಠಿಗಳನ್ನು ನಡೆಸುವುದು ಸಾಧ್ಯವಾಗುತ್ತಿದೆ’ ಎಂದೂ ಪಾತ್ರಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>