<p><strong>ನವದೆಹಲಿ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತೀಯರ ವಿರುದ್ಧ ಯುದ್ಧ ಘೋಷಿಸಿದ್ದು, ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರದಂದು ಗಂಭೀರ ಆರೋಪ ಮಾಡಿದೆ.</p>.<p>ರೈತರ ಪ್ರತಿಭಟನೆಯನ್ನು ದಮನಿಸಲು ಪ್ರಯತ್ನಿಸಿದ್ದಲ್ಲಿ ದೇಶಾದ್ಯಂತ ವ್ಯಾಪಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಬಿಜೆಪಿಯಿಂದ ಪ್ರತ್ಯಾರೋಪ ದಾಖಲಾಗಿದೆ.</p>.<p>ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಸ್ಮೃತಿ ಇರಾನಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ನಿಲುವುಗಳನ್ನು ಬೆಂಬಲಿಸದಿದ್ದರೆ ನಗರಗಳು ಹೊತ್ತಿ ಉರಿಯುವುದಾಗಿ ರಾಹುಲ್ ಗಾಂಧಿ ಹೇಳಿರುವುದಾಗಿ ಆರೋಪಿಸಿದರು.</p>.<p>ನಮ್ಮ ಪ್ರಜಾಪ್ರಭುತ್ವ ಇತಿಹಾಸದಲ್ಲಿ ರಾಜಕೀಯ ನಾಯಕರು ಶಾಂತಿಯನ್ನು ಉತ್ತೇಜಿಸುವ ಬದಲು ಹಿಂಸಾಚಾರದ ಬೆಂಕಿಯನ್ನು ಹರಡಲು ಬಯಸಿರುವುದನ್ನು ಹಿಂದೆಂದೂ ನಾವು ನೋಡಿಲ್ಲ ಎಂದು ವಾಗ್ದಾಳಿ ನಡೆಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/pm-weakening-india-by-attacking-farmers-rahul-gandhi-800643.html" itemprop="url">ರೈತರ ಮೇಲೆ ದಾಳಿ ಮೂಲಕ ಪ್ರಧಾನಿ ದೇಶವನ್ನು ದುರ್ಬಲಗೊಳಿಸುತ್ತಿದ್ದಾರೆ: ರಾಹುಲ್ </a></p>.<p>ಗಣರಾಜ್ಯೋತ್ಸವ ದಿನದಂದು ರೈತರ ಟ್ರ್ಯಾಕ್ಟರ್ ಪೆರೇಡ್ ಹಿಂಸಾಚಾರದಲ್ಲಿ ಗಾಯಗೊಂಡಿದ್ದ 400ರಷ್ಟು ಪೊಲೀಸರಿಗೆ ಸಾಂತ್ವನ ಹೇಳದಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡರು. ಇದು ನಿಜಕ್ಕೂ ಆಘಾತಕಾರಿ. ಆದರೆ ರಾಹುಲ್ ಗಾಂಧಿ ಅವರಿಂದ ಇದನ್ನೇ ನಿರೀಕ್ಷಿಸಲಾಗಿತ್ತು ಎಂದು ಹೇಳಿದರು.</p>.<p>ಕಾನೂನು ಸುವ್ಯವಸ್ಥೆಯನ್ನು ಒಡೆಯುವುದಷ್ಟೇ ಅಲ್ಲದೆ ತ್ರಿವರ್ಣ ಧ್ವಜವನ್ನು ಅವಮಾನಿಸಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಬಯಸುತ್ತಾರೆ ಎಂದು ಹೇಳಿದರು.</p>.<p>ದೆಹಲಿಯಲ್ಲಿ ಪೊಲೀಸರು ಸಂಯಮವನ್ನು ಪಾಲಿಸಿರುವುದರಿಂದ ಶವಗಳ ರಾಶಿ ಬೀಳದೇ ಇರುವುದಕ್ಕೆ ರಾಹುಲ್ ಗಾಂಧಿ ಅಸಮಾಧಾನಗೊಂಡಿದ್ದಾರೆ. ಅದಕ್ಕಾಗಿ ಸ್ವತಃ ದೇಶದಲ್ಲಿ ಹಿಂಸಾಚಾರದ ಕಿಡಿ ಹೊತ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಈ ಮೊದಲು ಹೇಳಿಕೆ ನೀಡಿರುವ ರಾಹುಲ್ ಗಾಂಧಿ, ಕೃಷಿ ಕಾಯ್ದೆಗಳನ್ನು ಕಸದ ಬುಟ್ಟಿಗೆ ಎಸೆಯುವುದೊಂದೇ ಏಕೈಕ ಪರಿಹಾರ. ಇಲ್ಲವಾದ್ದಲ್ಲಿ ಆಂದೋಲನ ದೇಶದೆಲ್ಲೆಡೆ ವ್ಯಾಪಿಸಲಿದೆ ಎಂದು ಎಚ್ಚರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತೀಯರ ವಿರುದ್ಧ ಯುದ್ಧ ಘೋಷಿಸಿದ್ದು, ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರದಂದು ಗಂಭೀರ ಆರೋಪ ಮಾಡಿದೆ.</p>.<p>ರೈತರ ಪ್ರತಿಭಟನೆಯನ್ನು ದಮನಿಸಲು ಪ್ರಯತ್ನಿಸಿದ್ದಲ್ಲಿ ದೇಶಾದ್ಯಂತ ವ್ಯಾಪಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಬಿಜೆಪಿಯಿಂದ ಪ್ರತ್ಯಾರೋಪ ದಾಖಲಾಗಿದೆ.</p>.<p>ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಸ್ಮೃತಿ ಇರಾನಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ನಿಲುವುಗಳನ್ನು ಬೆಂಬಲಿಸದಿದ್ದರೆ ನಗರಗಳು ಹೊತ್ತಿ ಉರಿಯುವುದಾಗಿ ರಾಹುಲ್ ಗಾಂಧಿ ಹೇಳಿರುವುದಾಗಿ ಆರೋಪಿಸಿದರು.</p>.<p>ನಮ್ಮ ಪ್ರಜಾಪ್ರಭುತ್ವ ಇತಿಹಾಸದಲ್ಲಿ ರಾಜಕೀಯ ನಾಯಕರು ಶಾಂತಿಯನ್ನು ಉತ್ತೇಜಿಸುವ ಬದಲು ಹಿಂಸಾಚಾರದ ಬೆಂಕಿಯನ್ನು ಹರಡಲು ಬಯಸಿರುವುದನ್ನು ಹಿಂದೆಂದೂ ನಾವು ನೋಡಿಲ್ಲ ಎಂದು ವಾಗ್ದಾಳಿ ನಡೆಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/pm-weakening-india-by-attacking-farmers-rahul-gandhi-800643.html" itemprop="url">ರೈತರ ಮೇಲೆ ದಾಳಿ ಮೂಲಕ ಪ್ರಧಾನಿ ದೇಶವನ್ನು ದುರ್ಬಲಗೊಳಿಸುತ್ತಿದ್ದಾರೆ: ರಾಹುಲ್ </a></p>.<p>ಗಣರಾಜ್ಯೋತ್ಸವ ದಿನದಂದು ರೈತರ ಟ್ರ್ಯಾಕ್ಟರ್ ಪೆರೇಡ್ ಹಿಂಸಾಚಾರದಲ್ಲಿ ಗಾಯಗೊಂಡಿದ್ದ 400ರಷ್ಟು ಪೊಲೀಸರಿಗೆ ಸಾಂತ್ವನ ಹೇಳದಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡರು. ಇದು ನಿಜಕ್ಕೂ ಆಘಾತಕಾರಿ. ಆದರೆ ರಾಹುಲ್ ಗಾಂಧಿ ಅವರಿಂದ ಇದನ್ನೇ ನಿರೀಕ್ಷಿಸಲಾಗಿತ್ತು ಎಂದು ಹೇಳಿದರು.</p>.<p>ಕಾನೂನು ಸುವ್ಯವಸ್ಥೆಯನ್ನು ಒಡೆಯುವುದಷ್ಟೇ ಅಲ್ಲದೆ ತ್ರಿವರ್ಣ ಧ್ವಜವನ್ನು ಅವಮಾನಿಸಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಬಯಸುತ್ತಾರೆ ಎಂದು ಹೇಳಿದರು.</p>.<p>ದೆಹಲಿಯಲ್ಲಿ ಪೊಲೀಸರು ಸಂಯಮವನ್ನು ಪಾಲಿಸಿರುವುದರಿಂದ ಶವಗಳ ರಾಶಿ ಬೀಳದೇ ಇರುವುದಕ್ಕೆ ರಾಹುಲ್ ಗಾಂಧಿ ಅಸಮಾಧಾನಗೊಂಡಿದ್ದಾರೆ. ಅದಕ್ಕಾಗಿ ಸ್ವತಃ ದೇಶದಲ್ಲಿ ಹಿಂಸಾಚಾರದ ಕಿಡಿ ಹೊತ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಈ ಮೊದಲು ಹೇಳಿಕೆ ನೀಡಿರುವ ರಾಹುಲ್ ಗಾಂಧಿ, ಕೃಷಿ ಕಾಯ್ದೆಗಳನ್ನು ಕಸದ ಬುಟ್ಟಿಗೆ ಎಸೆಯುವುದೊಂದೇ ಏಕೈಕ ಪರಿಹಾರ. ಇಲ್ಲವಾದ್ದಲ್ಲಿ ಆಂದೋಲನ ದೇಶದೆಲ್ಲೆಡೆ ವ್ಯಾಪಿಸಲಿದೆ ಎಂದು ಎಚ್ಚರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>