ಕೋಲ್ಕತ್ತ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭವಾನಿಪುರ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವಾಗ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿವರ ನಮೂದಿಸಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಈ ಸಂಬಂಧ ಚುನಾವಣಾ ಆಯೋಗಕ್ಕೆ ಬಿಜೆಪಿಯ ಮುಖ್ಯ ಚುನಾವಣಾ ಏಜೆಂಟ್ ಆಗಿರುವ ಸಜಲ್ ಘೋಷ್, ಕ್ಷೇತ್ರದ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ತಿಬರೆವಾಲ್ ಅವರು ದೂರು ಸಲ್ಲಿಸಿದ್ದಾರೆ.
ಮಮತಾ ಬ್ಯಾನರ್ಜಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಈ ಕುರಿತ ವಿವರಗಳನ್ನು ತಮ್ಮ ನಾಮಪತ್ರ ಜೊತೆಗೆ ನೀಡಿಲ್ಲ ಎಂದು ಸಜಲ್ ಘೋಷ್ ದೂರಿನಲ್ಲಿ ಆರೋಪಿಸಿದ್ದಾರೆ.