ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾನೂನು ವಿಚಾರಣೆಯನ್ನೇ ವಿಷಯವಾಗಿಸಿಕೊಂಡು ದೇಶವ್ಯಾಪಿ ಕಾನೂನು ಸುವ್ಯವಸ್ಥೆಯನ್ನು ದುರ್ಬಲಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಪೊಲೀಸರ ಮೇಲೆ ಹಲ್ಲೆ ಮಾಡುವುದು, ಪೊಲೀಸ್ ವಾಹನಗಳನ್ನು ಜಖಂಗೊಳಿಸುವುದು, ಬೈಕ್ ಬಸ್ಗಳನ್ನು ಸುಡುವುದು ನ್ಯಾಯವೇ?’ ಎಂದು ಪ್ರಶ್ನಿಸಿದೆ.