ನವದೆಹಲಿ: ‘ಬಿಹಾರ ಮೂಲದ ವಲಸೆ ಕಾರ್ಮಿಕ ಕುಟುಂಬದ ಆರು ವರ್ಷದ ಬಾಲಕಿ ಮೇಲೆ ಪಂಜಾಬ್ನಲ್ಲಿ ಅತ್ಯಾಚಾರವೆಸಗಿ, ಹತ್ಯೆಗೈಯಲಾಗಿದೆ’ ಎಂದು ಆರೋಪಿಸಿರುವ ಬಿಜೆಪಿ, ‘ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸಂತ್ರಸ್ತೆಯ ಕುಟುಂಬದವರನ್ನುಏಕೆ ಭೇಟಿಯಾಗಿಲ್ಲ’ ಎಂದು ಪ್ರಶ್ನಿಸಿದೆ.