ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಣಾಳಿಕೆಯಲ್ಲಿ ತಪ್ಪಾದ ಭೂಪಟ: ಬೇಷರತ್ ಕ್ಷಮೆ ಯಾಚಿಸಿದ ಶಶಿ ತರೂರ್

Last Updated 30 ಸೆಪ್ಟೆಂಬರ್ 2022, 13:49 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಸಂಸದ ಶಶಿ ತರೂರ್, ತಮ್ಮ ಪ್ರಣಾಳಿಕೆಯಲ್ಲಿ ಭಾರತದ ತಪ್ಪಾದ ಭೂಪಟವನ್ನು ಹಂಚಿಕೊಳ್ಳುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.

ಇಂದು ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ ತರೂರ್, ತಮ್ಮ ಪ್ರಣಾಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಸೇರಿದಂತೆ ಕೆಲವು ಭಾಗಗಳು ಇಲ್ಲದೇ ಇರುವ ಭಾರತದ ತಪ್ಪು ಭೂಪಟವನ್ನು ಹಂಚಿಕೊಂಡಿದ್ದರು.

ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್‌ ಮಾಡಿ, ತರೂರ್ ತಮ್ಮ ಪ್ರಣಾಳಿಕೆಯಲ್ಲಿ ಭಾರತದ ನಕ್ಷೆಯನ್ನು ವಿರೂಪಗೊಳಿಸಿದ್ದಾರೆ ಎಂದು ಟೀಕಿಸಿದ್ದರು.

ತರೂರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ‘ರಾಹುಲ್ ಗಾಂಧಿ ಅವರು ಭಾರತ್ ಜೋಡೊ ಯಾತ್ರೆಯಲ್ಲಿ ತೊಡಗಿರುವಾಗ, ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿರುವವರು ಭಾರತವನ್ನು ಛಿದ್ರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಬಹುಶಃ ಗಾಂಧಿಗಳ ಆಪ್ತರಾಗಿರಲು ಇದು ಸಹಾಯ ಮಾಡುತ್ತದೆ ಎಂದು ಅವರು ಭಾವಿಸಿರಬಹುದು’ಎಂದು ಟೀಕಿಸಿದ್ದರು.

ತೀವ್ರ ಟೀಕೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ತರೂರ್, ಬೇಷರತ್ ಕ್ಷಮೆಯಾಚಿಸಿದ್ದಾರೆ. ಬಳಿಕ, ಟ್ವೀಟ್‌ನಲ್ಲಿ ಸರಿಯಾದ ನಕ್ಷೆ ಹಂಚಿಕೊಂಡಿದ್ದಾರೆ.

ನನ್ನ ಪ್ರಣಾಳಿಕೆಯಲ್ಲಾದ ಪ್ರಮಾದದ ಬಗ್ಗೆ ಟ್ರೋಲ್‌ಗಳ ಬಿರುಗಾಳಿಯೇ ಎದ್ದಿದೆ. ಆದರೆ, ಯಾರೂ ಸಹ ಉದ್ದೇಶಪೂರ್ವಕವಾಗಿ ಇಂತಹ ತಪ್ಪು ಮಾಡುವುದಿಲ್ಲ. ಸ್ವಯಂಸೇವಕರ ಸಣ್ಣ ತಂಡವೊಂದು ಈ ತಪ್ಪು ಮಾಡಿದೆ. ನನ್ನ ಗಮನಕ್ಕೆ ಬಂದ ಕೂಡಲೇ ಸರಿಪಡಿಸಿದ್ದೇನೆ. ಈ ಪ್ರಮಾದಕ್ಕೆ ಬೇಷರತ್ ಕ್ಷಮೆಯಾಚಿಸುತ್ತೇನೆ. ಸರಿಪಡಿಸಲಾದ ಪ್ರಣಾಳಿಕೆ ಇಲ್ಲಿದೆ ನೋಡಿ ಎಂದು ಪ್ರಣಾಳಿಕೆ ಲಿಂಕ್ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT