ಇಂದು ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ ತರೂರ್, ತಮ್ಮ ಪ್ರಣಾಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಸೇರಿದಂತೆ ಕೆಲವು ಭಾಗಗಳು ಇಲ್ಲದೇ ಇರುವ ಭಾರತದ ತಪ್ಪು ಭೂಪಟವನ್ನು ಹಂಚಿಕೊಂಡಿದ್ದರು.
ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ತರೂರ್ ತಮ್ಮ ಪ್ರಣಾಳಿಕೆಯಲ್ಲಿ ಭಾರತದ ನಕ್ಷೆಯನ್ನು ವಿರೂಪಗೊಳಿಸಿದ್ದಾರೆ ಎಂದು ಟೀಕಿಸಿದ್ದರು.