<p><strong>ಲಖನೌ</strong>: ಕತ್ತಲಾದ ಮೇಲೆ, ಮಹಿಳೆಯರು ಪೊಲೀಸ್ ಠಾಣೆಗೆ ಹೋಗದಂತೆ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷೆ ಬೇಬಿ ರಾಣಿ ಮೌರ್ಯ ವಿಲಕ್ಷಣ ಸಲಹೆ ನೀಡಿದ್ದಾರೆ.</p>.<p>ಈ ಹೇಳಿಕೆಯಿಂದ ಪಕ್ಷವು ಮುಜುಗರಕ್ಕೀಡಾಗಿದೆ. ಇದರೊಂದಿಗೆ, ಉತ್ತರ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆ ಬಗೆಗೂ ಪ್ರಶ್ನೆಯನ್ನು ಹುಟ್ಟುಹಾಕಿದೆ.</p>.<p>ಉತ್ತರಾಖಂಡದ ಮಾಜಿ ರಾಜ್ಯಪಾಲರಾದ ಬೇಬಿ ರಾಣಿ, ಶುಕ್ರವಾರ ಸಂಜೆ ವಾರಾಣಸಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಥ ಸಲಹೆ ನೀಡಿದ್ದಾರೆ.</p>.<p>‘ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಇರುತ್ತಾದರೂ ಸಂಜೆ ಐದರ ನಂತರ ಮಹಿಳೆಯರು ಅಲ್ಲಿಗೆ ಹೋಗದಿರುವುದೇ ಒಳ್ಳೆಯದು. ಪೊಲೀಸ್ ಠಾಣೆಗೆ ಹೋಗಲೇಬೇಕಿದ್ದರೆ ಅಣ್ಣ, ಅಪ್ಪ, ಪತಿ ಯಾರನ್ನಾದರೂ ಜೊತೆಗೆ ಕರೆದುಕೊಂಡು ಹೋಗಿ’ ಎಂದು ಹೇಳಿದ್ದಾರೆ.</p>.<p>ಮಹಿಳೆಯರ ಸುರಕ್ಷತೆಗಾಗಿ ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಕಳೆದ ಕೆಲವು ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ ಎಂದೂ ಹೇಳಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಲು ಬಿಜೆಪಿ ಮುಖಂಡರು ನಿರಾಕರಿಸಿದ್ದಾರೆ. ಆದರೆ, ವಿರೋಧ ಪಕ್ಷಗಳು, ಮೌರ್ಯ ಅವರ ಹೇಳಿಕೆ ರಾಜ್ಯದ ನೈಜ ಸ್ಥಿತಿಯನ್ನು ಬಿಂಬಿಸಿದ್ದಾಗಿ ಹೇಳಿವೆ.</p>.<p>‘ಉತ್ತರ ಪ್ರದೇಶದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ನಾವು ಹೇಳುತ್ತಲೇ ಬಂದಿದ್ದೇವೆ. ಪೊಲೀಸ್ ಠಾಣೆಗಳಲ್ಲೂ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂಬುದನ್ನು ನಾವು ಹಲವು ಬಾರಿ ಹೇಳಿದ್ದೇವೆ. ಮೌರ್ಯ ಅವರ ಹೇಳಿಕೆ ನಮ್ಮ ಆರೋಪಗಳಿಗೆ ಬಲ ನೀಡಿವೆ’ ಎಂದು ಸಮಾಜವಾದಿ ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಕತ್ತಲಾದ ಮೇಲೆ, ಮಹಿಳೆಯರು ಪೊಲೀಸ್ ಠಾಣೆಗೆ ಹೋಗದಂತೆ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷೆ ಬೇಬಿ ರಾಣಿ ಮೌರ್ಯ ವಿಲಕ್ಷಣ ಸಲಹೆ ನೀಡಿದ್ದಾರೆ.</p>.<p>ಈ ಹೇಳಿಕೆಯಿಂದ ಪಕ್ಷವು ಮುಜುಗರಕ್ಕೀಡಾಗಿದೆ. ಇದರೊಂದಿಗೆ, ಉತ್ತರ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆ ಬಗೆಗೂ ಪ್ರಶ್ನೆಯನ್ನು ಹುಟ್ಟುಹಾಕಿದೆ.</p>.<p>ಉತ್ತರಾಖಂಡದ ಮಾಜಿ ರಾಜ್ಯಪಾಲರಾದ ಬೇಬಿ ರಾಣಿ, ಶುಕ್ರವಾರ ಸಂಜೆ ವಾರಾಣಸಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಥ ಸಲಹೆ ನೀಡಿದ್ದಾರೆ.</p>.<p>‘ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಇರುತ್ತಾದರೂ ಸಂಜೆ ಐದರ ನಂತರ ಮಹಿಳೆಯರು ಅಲ್ಲಿಗೆ ಹೋಗದಿರುವುದೇ ಒಳ್ಳೆಯದು. ಪೊಲೀಸ್ ಠಾಣೆಗೆ ಹೋಗಲೇಬೇಕಿದ್ದರೆ ಅಣ್ಣ, ಅಪ್ಪ, ಪತಿ ಯಾರನ್ನಾದರೂ ಜೊತೆಗೆ ಕರೆದುಕೊಂಡು ಹೋಗಿ’ ಎಂದು ಹೇಳಿದ್ದಾರೆ.</p>.<p>ಮಹಿಳೆಯರ ಸುರಕ್ಷತೆಗಾಗಿ ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಕಳೆದ ಕೆಲವು ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ ಎಂದೂ ಹೇಳಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಲು ಬಿಜೆಪಿ ಮುಖಂಡರು ನಿರಾಕರಿಸಿದ್ದಾರೆ. ಆದರೆ, ವಿರೋಧ ಪಕ್ಷಗಳು, ಮೌರ್ಯ ಅವರ ಹೇಳಿಕೆ ರಾಜ್ಯದ ನೈಜ ಸ್ಥಿತಿಯನ್ನು ಬಿಂಬಿಸಿದ್ದಾಗಿ ಹೇಳಿವೆ.</p>.<p>‘ಉತ್ತರ ಪ್ರದೇಶದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ನಾವು ಹೇಳುತ್ತಲೇ ಬಂದಿದ್ದೇವೆ. ಪೊಲೀಸ್ ಠಾಣೆಗಳಲ್ಲೂ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂಬುದನ್ನು ನಾವು ಹಲವು ಬಾರಿ ಹೇಳಿದ್ದೇವೆ. ಮೌರ್ಯ ಅವರ ಹೇಳಿಕೆ ನಮ್ಮ ಆರೋಪಗಳಿಗೆ ಬಲ ನೀಡಿವೆ’ ಎಂದು ಸಮಾಜವಾದಿ ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>