ತ್ರಿಪುರಾದ ಅಗರ್ತಲಾ, ಜುಬಾರಾಜ್ನಗರ್, ಸುರ್ಮಾ ಹಾಗೂ ಬರ್ದೊವಾಲಿ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಸಾಹಾ ಅವರು ಬರ್ದೊವಾಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವರಿಗೆ ಈ ಗೆಲುವು ಅನಿವಾರ್ಯವಾಗಿತ್ತು.
4 ಸ್ಥಾನಗಳ ಪೈಕಿ ಬಿಜೆಪಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ಅಗರ್ತಲಾ ಕ್ಷೇತ್ರದಿಂದ ಗೆಲುವು ಕಂಡಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.
ವಿಪ್ಲವ್ ದೇವ್ ಅವರು ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕಳೆದ ತಿಂಗಳು, ರಾಜ್ಯಸಭಾ ಸದಸ್ಯ ಮಾಣಿಕ್ ಸಾಹಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.