<p><strong>ತುರಾ:</strong> ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲ 60 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಬಲಿಷ್ಠ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಚುನಾವಣೆಗೂ ಮುನ್ನ ಎನ್ಪಿಪಿಯೊಂದಿಗೆ ಮೈತ್ರಿಯನ್ನು ಕಡಿದುಕೊಂಡಿದ್ದು, ಬಲಿಷ್ಠ ಪಕ್ಷವಾಗಿ ರೂಪುಗೊಳ್ಳಲು ನೆರವಾಗುತ್ತದೆ ಎಂದು ಅವರು ಹೇಳಿದರು.</p>.<p>ತುರಾ ಉತ್ತರ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಭಷ್ಟಾಚಾರ ನಿರ್ಮೂಲನೆಗಾಗಿ ಬಿಜೆಪಿಗೆ ಮತ ಹಾಕಿ ಎಂದು ಜನರಿಗೆ ಮನವಿ ಮಾಡಿದರು.</p>.<p>ಇದನ್ನೂ ಓದಿ: <a href="https://www.prajavani.net/india-news/tripura-cong-bjp-bjp-gen-secy-get-ec-notice-for-poll-day-tweets-1015885.html" itemprop="url">ತ್ರಿಪುರ ಚುನಾವಣೆ ದಿನದಂದು ಮತಯಾಚನೆ: ಕಾಂಗ್ರೆಸ್, ಬಿಜೆಪಿಗೆ ನೋಟಿಸ್ ಜಾರಿ </a></p>.<p>ಕೆಟ್ಟ ಆಡಳಿತ ಹಾಗೂ ಭ್ರಷ್ಟಾಚಾರದಿಂದಾಗಿ ರಾಜ್ಯ 2022-23ರ ಸಾಲಿನಲ್ಲಿ ₹1849 ಕೋಟಿ ಕೊರತೆ ಎದುರಿಸುತ್ತಿದೆ. ಆರ್ಬಿಐ ಪ್ರಕಾರ ದೇಶದಲ್ಲೇ ಮೇಘಾಲಯದ ಬೆಳವಣಿಗೆ ಅತ್ಯಂತ ನಿಧಾನಗತಿಯಲ್ಲಿದೆ ಎಂದು ಹೇಳಿದರು.</p>.<p>ಮೇಘಾಲಯದ ಸಮಗ್ರ ಅಭಿವೃದ್ಧಿಗಾಗಿ ₹6,000 ಕೋಟಿಯ ಪಿಎಂ-ಡಿವೈನ್ ಯೋಜನೆ ಪ್ರಾರಂಭಿಸಲಾಗಿದೆ ಎಂದು ಅವರು ಉಲ್ಲೇಖ ಮಾಡಿದರು.</p>.<p>ಈಶಾನ್ಯಕ್ಕೆ 51 ಬಾರಿ ಭೇಟಿ ಕೊಟ್ಟು ಈ ಪ್ರದೇಶದ ಅಭಿವೃದ್ಧಿಗೆ ನೆರವಾದ ಏಕಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರಾಗಿದ್ದಾರೆ ಎಂದು ಅವರು ತಿಳಿಸಿದರು.</p>.<p>ಮೇಘಾಲಯ ವಿಧಾನಸಭೆಗೆ ಫೆಬ್ರುವರಿ 27ರಂದು ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರಾ:</strong> ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲ 60 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಬಲಿಷ್ಠ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಚುನಾವಣೆಗೂ ಮುನ್ನ ಎನ್ಪಿಪಿಯೊಂದಿಗೆ ಮೈತ್ರಿಯನ್ನು ಕಡಿದುಕೊಂಡಿದ್ದು, ಬಲಿಷ್ಠ ಪಕ್ಷವಾಗಿ ರೂಪುಗೊಳ್ಳಲು ನೆರವಾಗುತ್ತದೆ ಎಂದು ಅವರು ಹೇಳಿದರು.</p>.<p>ತುರಾ ಉತ್ತರ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಭಷ್ಟಾಚಾರ ನಿರ್ಮೂಲನೆಗಾಗಿ ಬಿಜೆಪಿಗೆ ಮತ ಹಾಕಿ ಎಂದು ಜನರಿಗೆ ಮನವಿ ಮಾಡಿದರು.</p>.<p>ಇದನ್ನೂ ಓದಿ: <a href="https://www.prajavani.net/india-news/tripura-cong-bjp-bjp-gen-secy-get-ec-notice-for-poll-day-tweets-1015885.html" itemprop="url">ತ್ರಿಪುರ ಚುನಾವಣೆ ದಿನದಂದು ಮತಯಾಚನೆ: ಕಾಂಗ್ರೆಸ್, ಬಿಜೆಪಿಗೆ ನೋಟಿಸ್ ಜಾರಿ </a></p>.<p>ಕೆಟ್ಟ ಆಡಳಿತ ಹಾಗೂ ಭ್ರಷ್ಟಾಚಾರದಿಂದಾಗಿ ರಾಜ್ಯ 2022-23ರ ಸಾಲಿನಲ್ಲಿ ₹1849 ಕೋಟಿ ಕೊರತೆ ಎದುರಿಸುತ್ತಿದೆ. ಆರ್ಬಿಐ ಪ್ರಕಾರ ದೇಶದಲ್ಲೇ ಮೇಘಾಲಯದ ಬೆಳವಣಿಗೆ ಅತ್ಯಂತ ನಿಧಾನಗತಿಯಲ್ಲಿದೆ ಎಂದು ಹೇಳಿದರು.</p>.<p>ಮೇಘಾಲಯದ ಸಮಗ್ರ ಅಭಿವೃದ್ಧಿಗಾಗಿ ₹6,000 ಕೋಟಿಯ ಪಿಎಂ-ಡಿವೈನ್ ಯೋಜನೆ ಪ್ರಾರಂಭಿಸಲಾಗಿದೆ ಎಂದು ಅವರು ಉಲ್ಲೇಖ ಮಾಡಿದರು.</p>.<p>ಈಶಾನ್ಯಕ್ಕೆ 51 ಬಾರಿ ಭೇಟಿ ಕೊಟ್ಟು ಈ ಪ್ರದೇಶದ ಅಭಿವೃದ್ಧಿಗೆ ನೆರವಾದ ಏಕಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರಾಗಿದ್ದಾರೆ ಎಂದು ಅವರು ತಿಳಿಸಿದರು.</p>.<p>ಮೇಘಾಲಯ ವಿಧಾನಸಭೆಗೆ ಫೆಬ್ರುವರಿ 27ರಂದು ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>