<p><strong>ಕೋಲ್ಕತ್ತ</strong>: ಬಿಜೆಪಿ ಕೈಗೊಂಡಿದ್ದ ‘ನಬಾನ್ನ ಚಲೊ ಅಭಿಯಾನ’ (ರಾಜ್ಯ ಸಚಿವಾಲಯಕ್ಕೆ ಕಾಲ್ನಡಿಗೆ ಜಾಥಾ) ಮಂಗಳವಾರ ಹಿಂಸಾಚಾರಕ್ಕೆ ತಿರುಗಿತ್ತು.</p>.<p>ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಶಸ್ತ್ರಸಜ್ಜಿತ ಗೂಂಡಾಗಳನ್ನು ಹೊರಗಿನಿಂದ ಬಿಜೆಪಿ ಕರೆತಂದಿದೆ’ ಎಂದು ಆರೋಪಿಸಿದ್ದಾರೆ.</p>.<p>‘ಹಿಂಸೆಗಿಳಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಗುಂಡು ಹಾರಿಸಬಹುದಿತ್ತು. ಆದರೆ, ಸರ್ಕಾರ ಸಂಯಮ ವಹಿಸಿತು’ ಎಂದು ತಿಳಿಸಿದ್ದಾರೆ.</p>.<p>‘ನಿನ್ನೆ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ರಾಜಕಾರಣ ಹಾಗೂ ಸಮಾಜವಿರೋಧಿ ಚಟುವಟಿಕೆಗಳು ಒಂದಾಗಿ ನಡೆಯಲು ಸಾಧ್ಯವಿಲ್ಲ. ಬೆಂಕಿ ಹಚ್ಚುವುದು ಮತ್ತು ಪೊಲೀಸರ ಮೇಲೆ ದಾಳಿ ಮಾಡುವುದು ಕಾನೂನಿಗೆ ವಿರುದ್ಧವಾಗಿದೆ. ಕಾನೂನು ತನ್ನ ಮಾರ್ಗವನ್ನು ಅನುಸರಿಸಲಿದೆ’ ಎಂದು ಎಚ್ಚರಿಸಿದ್ದಾರೆ.</p>.<p>‘ಶಾಂತಿಯುತ ಪ್ರತಿಭಟನೆಯಿಂದ ನಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಗೂಂಡಾಗಿರಿಯನ್ನು ನಾವು ಸಹಿಸಲಾಗುವುದಿಲ್ಲ’ ಎಂದು ಮಮತಾ ಎಚ್ಚರಿಸಿದ್ದಾರೆ.</p>.<p>ಮಂಗಳವಾರ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ನಡೆದ ಘರ್ಷಣೆ ತಾರಕಕ್ಕೇರಿ, ಕೋಲ್ಕತ್ತದ ಜನಜೀವನ ಅಸ್ತವ್ಯಸ್ತಗೊಂಡಿತು.</p>.<p>ಪ್ರತಿಭಟನಕಾರರು ನಗರದ ಕೇಂದ್ರ ಭಾಗದಲ್ಲಿ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿ, ಪೊಲೀಸರತ್ತ ಕಲ್ಲುಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಸಿಡಿಸಿ ಪ್ರತಿಭಟನಕಾರರನ್ನು ಚದುರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಬಿಜೆಪಿ ಕೈಗೊಂಡಿದ್ದ ‘ನಬಾನ್ನ ಚಲೊ ಅಭಿಯಾನ’ (ರಾಜ್ಯ ಸಚಿವಾಲಯಕ್ಕೆ ಕಾಲ್ನಡಿಗೆ ಜಾಥಾ) ಮಂಗಳವಾರ ಹಿಂಸಾಚಾರಕ್ಕೆ ತಿರುಗಿತ್ತು.</p>.<p>ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಶಸ್ತ್ರಸಜ್ಜಿತ ಗೂಂಡಾಗಳನ್ನು ಹೊರಗಿನಿಂದ ಬಿಜೆಪಿ ಕರೆತಂದಿದೆ’ ಎಂದು ಆರೋಪಿಸಿದ್ದಾರೆ.</p>.<p>‘ಹಿಂಸೆಗಿಳಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಗುಂಡು ಹಾರಿಸಬಹುದಿತ್ತು. ಆದರೆ, ಸರ್ಕಾರ ಸಂಯಮ ವಹಿಸಿತು’ ಎಂದು ತಿಳಿಸಿದ್ದಾರೆ.</p>.<p>‘ನಿನ್ನೆ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ರಾಜಕಾರಣ ಹಾಗೂ ಸಮಾಜವಿರೋಧಿ ಚಟುವಟಿಕೆಗಳು ಒಂದಾಗಿ ನಡೆಯಲು ಸಾಧ್ಯವಿಲ್ಲ. ಬೆಂಕಿ ಹಚ್ಚುವುದು ಮತ್ತು ಪೊಲೀಸರ ಮೇಲೆ ದಾಳಿ ಮಾಡುವುದು ಕಾನೂನಿಗೆ ವಿರುದ್ಧವಾಗಿದೆ. ಕಾನೂನು ತನ್ನ ಮಾರ್ಗವನ್ನು ಅನುಸರಿಸಲಿದೆ’ ಎಂದು ಎಚ್ಚರಿಸಿದ್ದಾರೆ.</p>.<p>‘ಶಾಂತಿಯುತ ಪ್ರತಿಭಟನೆಯಿಂದ ನಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಗೂಂಡಾಗಿರಿಯನ್ನು ನಾವು ಸಹಿಸಲಾಗುವುದಿಲ್ಲ’ ಎಂದು ಮಮತಾ ಎಚ್ಚರಿಸಿದ್ದಾರೆ.</p>.<p>ಮಂಗಳವಾರ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ನಡೆದ ಘರ್ಷಣೆ ತಾರಕಕ್ಕೇರಿ, ಕೋಲ್ಕತ್ತದ ಜನಜೀವನ ಅಸ್ತವ್ಯಸ್ತಗೊಂಡಿತು.</p>.<p>ಪ್ರತಿಭಟನಕಾರರು ನಗರದ ಕೇಂದ್ರ ಭಾಗದಲ್ಲಿ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿ, ಪೊಲೀಸರತ್ತ ಕಲ್ಲುಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಸಿಡಿಸಿ ಪ್ರತಿಭಟನಕಾರರನ್ನು ಚದುರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>