ಭಾಂಗರ್, ಪಶ್ಚಿಮ ಬಂಗಾಳ: ‘ಬಿಜೆಪಿಯು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋತರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹತ್ಯೆಗೆ ಮುಂದಾಗಬಹುದು. ರಾಜ್ಯದಲ್ಲಿ ಅಪರಾಧ ಕೃತ್ಯಗಳನ್ನು ನಡೆಸಲು ಆ ಪಕ್ಷವು ಹೊರಗಿನಿಂದ ಜನರನ್ನು ಕರೆಸುತ್ತಿದೆ’ ಎಂದು ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ಹಿರಿಯ ಮುಖಂಡ ಸುಬ್ರತಾ ಮುಖರ್ಜಿ ಆರೋಪಿಸಿದ್ದಾರೆ.