ನಡ್ಡಾ ಅವರು ಕೋಯಿಕ್ಕೋಡ್ನಲ್ಲಿಹೊಸದಾಗಿ ನಿರ್ಮಿಸಲಾಗಿರುವ ಪಕ್ಷದ ಜಿಲ್ಲಾ ಸಮಿತಿ ಕಚೇರಿಯನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು, ʼಕೇರಳದಲ್ಲಿ ರಾಹುಲ್ ಗಾಂಧಿ ಅವರ ರಾಜಕೀಯ ಪ್ರವಾಸೋದ್ಯಮ ನಡೆಯುತ್ತಿದೆ. ಅವರು (ರಾಹುಲ್) ಅಮೇಥಿಯಲ್ಲಿ ಸೋಲು ಕಂಡು ವಯನಾಡ್ಗೆ ಓಡಿ ಹೋದರು. ರಾಜ್ಯ ಬದಲಿಸುವುದರಿಂದ ಯಾರೊಬ್ಬರ ನಡವಳಿಕೆ, ಉದ್ದೇಶಗಳು ಮತ್ತು ಜನರಿಗೆ ಸೇವೆ ಸಲ್ಲಿಸುವ ಸಮರ್ಪಣಾ ಭಾವದಲ್ಲಿ ಬದಲಾವಣೆಗಳಾಗುವುದಿಲ್ಲʼ ಎಂದು ಹೇಳಿದ್ದಾರೆ.