ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ

Last Updated 19 ಜನವರಿ 2021, 8:51 IST
ಅಕ್ಷರ ಗಾತ್ರ

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಚೀನಾ ಹಳ್ಳಿಯೊಂದನ್ನು ನಿರ್ಮಿಸಿರುವ ವರದಿಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತೆ, ಕೃಷಿ ಮತ್ತು ಕೋವಿಡ್-19 ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿರುಗೇಟು ನೀಡಿದ್ದಾರೆ.

ಚೀನಾ ವಿಚಾರವಾಗಿ ರಾಹುಲ್ ಗಾಂಧಿ, ಅವರ ರಾಜವಂಶ ಮತ್ತು ಕಾಂಗ್ರೆಸ್ ಸುಳ್ಳು ಹೇಳುವುದನ್ನು ಯಾವಾಗ ನಿಲ್ಲಿಸುತ್ತದೆ? ಅವರು ಉಲ್ಲೇಖಿಸುತ್ತಿರುವ ಅರುಣಾಚಲ ಪ್ರದೇಶದಲ್ಲಿ ಸೇರಿದಂತೆ ಸಾವಿರಾರು ಕಿ.ಮೀ ದೂರದ ಪ್ರದೇಶವನ್ನು ಚೀನಿಯರಿಗೆ ಪಂಡಿತ್ ನೆಹರೂ ಹೊರತುಪಡಿಸಿ ಬೇರೆ ಯಾರೂ ಉಡುಗೊರೆಯಾಗಿ ನೀಡಿಲ್ಲ ಎಂಬುದನ್ನು ಅವರು ನಿರಾಕರಿಸಬಹುದೇ? ಪದೇ ಪದೆ, ಕಾಂಗ್ರೆಸ್ ಏಕೆ ಚೀನಾಗೆ ಶರಣಾಗುತ್ತದೆ? ಎಂದು ನಡ್ಡಾ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿಯವರು ರೈತರನ್ನು 'ಪ್ರಚೋದಿಸುತ್ತಿದ್ದಾರೆ ಮತ್ತು ದಾರಿತಪ್ಪಿಸುತ್ತಿದ್ದಾರೆ' ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಸ್ವಾಮಿನಾಥನ್ ಆಯೋಗದ ವರದಿಯನ್ನು ವರ್ಷಗಳಿಂದ ಏಕೆ 'ಸ್ಥಗಿತಗೊಳಿಸಿತು' ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಯಾಕೆ ಹೆಚ್ಚಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

'ಕಾಂಗ್ರೆಸ್ ಸರ್ಕಾರಗಳ ಅಡಿಯಲ್ಲಿ ದಶಕಗಳಿಂದಲೂ ರೈತರು ಏಕೆ ಬಡವರಾಗಿಯೇ ಉಳಿದಿದ್ದರು? ಪ್ರತಿಪಕ್ಷಗಳು ಮಾತ್ರವೇ ರೈತರ ಬಗ್ಗೆ ಸಹಾನುಭೂತಿ ಹೊಂದಿವೆಯೇ?'. ಗಾಂಧಿಯವರು ತಮ್ಮ 'ತಿಂಗಳ ರಜೆಯಿಂದ' ಮರಳಿದ್ದಾರೆ. ಅವರನ್ನು ಕೆಲವು ಪ್ರಶ್ನೆಗಳನ್ನು ಕೇಳಲು ಬಯಸುವುದಾಗಿ ತಿಳಿಸಿದ್ದಾರೆ.

ಚೀನಾ ಮತ್ತು ಅವರ ಕಮ್ಯುನಿಸ್ಟ್ ಪಕ್ಷದೊಂದಿಗಿನ ಕಾಂಗ್ರೆಸ್ ಪಕ್ಷದ ಒಪ್ಪಂದವನ್ನು ರದ್ದುಗೊಳಿಸುವ ಉದ್ದೇಶ ರಾಹುಲ್ ಗಾಂಧಿಗೆ ಇದೆಯೇ? ತನ್ನ ಕುಟುಂಬದಿಂದ ನಿಯಂತ್ರಿಸಲ್ಪಡುವ ಟ್ರಸ್ಟ್‌ಗಳಿಗೆ ಚೀನಾದ ಬಹುಪಾಲು ಜನರನ್ನು ಹಿಂದಿರುಗಿಸಲು ಅವರು ಬಯಸುತ್ತಾರೆಯೇ? ಅಥವಾ ಅವರ ನೀತಿಗಳು ಮತ್ತು ಅಭ್ಯಾಸಗಳು ಚೀನಾದ ಹಣ ಮತ್ತು ಒಪ್ಪಂದದ ಪ್ರಕಾರ ನಿರ್ದೇಶಿಸಲ್ಪಡುತ್ತವೆಯೇ?' ಎಂದು ನಡ್ಡಾ ಪ್ರಶ್ನಿಸಿದ್ದಾರೆ.

ಕೋವಿಡ್-19 ವಿರುದ್ಧದ ಉತ್ಸಾಹಭರಿತ ಹೋರಾಟದಲ್ಲಿ ರಾಹುಲ್ ಗಾಂಧಿ ರಾಷ್ಟ್ರವನ್ನು ಕೆಳಮಟ್ಟಕ್ಕಿಳಿಸಲು ಎಲ್ಲ ಅವಕಾಶಗಳನ್ನು ಬಳಸಿಕೊಂಡರು. ಇಂದು ಭಾರತವು ಅತ್ಯಂತ ಕಡಿಮೆ ಪ್ರಕರಣಗಳನ್ನು ಹೊಂದಿರುವಾಗ ಮತ್ತು ನಮ್ಮ ವಿಜ್ಞಾನಿಗಳು ಲಸಿಕೆ ಕಂಡುಹಿಡಿದಾಗ ಅವರು ವಿಜ್ಞಾನಿಗಳನ್ನು ಏಕೆ ಅಭಿನಂದಿಸಲಿಲ್ಲ ಮತ್ತು 130 ಕೋಟಿ ಭಾರತೀಯರನ್ನು ಒಮ್ಮೆ ಕೂಡ ಶ್ಲಾಘಿಸಲಿಲ್ಲ ಏಕೆ? ಎಂದಿದ್ದಾರೆ.

ಎಲ್ಲಾ ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ (ಎಪಿಎಂಸಿ) ಮಂಡಿಗಳನ್ನು ಮುಚ್ಚಲಾಗುವುದು ಎಂದು ಗಾಂಧಿ ಸುಳ್ಳು ಹರಡುತ್ತಿದ್ದಾರೆ ಮತ್ತು ಕಾಂಗ್ರೆಸ್ ಪ್ರಣಾಳಿಕೆಯ ಒಂದು ಭಾಗವಾಗಿರುವ ಎಪಿಎಂಸಿ ಕಾಯ್ದೆಯ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಈಗ ತಮಿಳುನಾಡಿನಲ್ಲಿ ಜಲ್ಲಿಕಟ್ಟನ್ನು ನೋಡಿ ಆನಂದಿಸಿದರು. ಅವರು ಅಧಿಕಾರದಲ್ಲಿದ್ದಾಗ ಅವರ ಪಕ್ಷ ಅದನ್ನು ಏಕೆ ನಿಷೇಧಿಸಿತು ಮತ್ತು ತಮಿಳು ಸಂಸ್ಕೃತಿಯನ್ನು ಅವಮಾನಿಸಿತು? ಅವರು ಭಾರತದ ಸಂಸ್ಕೃತಿ ಮತ್ತು ನೀತಿಗಳ ಬಗ್ಗೆ ಹೆಮ್ಮೆ ಪಡುತ್ತಿಲ್ಲವೇ? ಈ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯವನ್ನು ರಾಹುಲ್ ಗಾಂಧಿ ತೋರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT