ಪಟ್ನಾ: ಬಿಜೆಪಿ ಜೊತೆ ಮೈತ್ರಿಯಲ್ಲಿದ್ದರೂ 2020ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಆ ಪಕ್ಷವು ಜೆಡಿಯು ವಿರುದ್ಧ ಪಿತೂರಿ ನಡೆಸಿತ್ತು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ಆರೋಪಿಸಿದ್ದಾರೆ.
ಬಿಜೆಪಿಯನ್ನು ವಿರೋಧಿಸುವ ಪಕ್ಷಗಳು ಕೈಜೋಡಿಸಿದರೆ 2024ರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಬಹುದು ಎಂದೂ ಅವರು ಪುನರುಚ್ಚರಿಸಿದ್ದಾರೆ.
ಪಕ್ಷದ ಮಹಾಅಧಿವೇಶನದಲ್ಲಿ ಮಾತನಾಡಿದ ಅವರು, ಬಿಜೆಪಿಯ ಜೊತೆ ಮೈತ್ರಿಯಲ್ಲಿದ್ದ ಕಾರಣ ತಮ್ಮ ಪಕ್ಷವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತೃಪ್ತಿಕರ ಕಾರ್ಯಕ್ಷಮತೆ ಪ್ರದರ್ಶಿಸಿದೆ ಎಂದೂ ದೂರಿದರು.
‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಬಿಹಾರಕ್ಕೆ ಏನೂ ಸಿಕ್ಕಿಲ್ಲ. ವಿಶೇಷ ಸ್ಥಾನಮಾನದ ಬೇಡಿಕೆಯನ್ನೂ ಅವರು ಒಪ್ಪಲಿಲ್ಲ’ ಎಂದರು.