ಲಡಾಖ್ನ ದ್ರಾಸ್ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದವರೆಗಿನ ಯಾತ್ರೆಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಂಗ್, ಸಂಸದ ತೇಜಸ್ವಿ ಸೂರ್ಯ ಅವರು ಹಸಿರು ನಿಶಾನೆ ತೋರಿದರು. ಸುಮಾರು ನೂರಕ್ಕೂ ಹೆಚ್ಚು ಬೈಕ್ಗಳು ರ್ಯಾಲಿಯಲ್ಲಿ ಭಾಗಿಯಾಗಿದ್ದವು. ಈ ವೇಳೆ ಬಿಜೆಪಿ ನಾಯಕರು ತಿರಂಗ ಹಿಡಿದು, ‘ಆಜಾದ್ ಹಿಂದೂಸ್ತಾನ್ ಜಿಂದಾಬಾದ್’, ‘ಅಖಂಡ ಭಾರತ ಜಿಂದಾಬಾದ್’ ಘೋಷಣೆ ಕೂಗಿದರು.