<p><strong>ಉತ್ತರಕಾಶಿ:</strong> ಉತ್ತರಾಖಂಡದಲ್ಲಿ ಬಿಜೆಪಿಯು ಎರಡು ಬಾರಿ ಮುಖ್ಯಮಂತ್ರಿ ಬದಲಾವಣೆ ಮಾಡುವಂತಾಗಲು ಅರ್ಚಕರ ಶಾಪ ಕಾರಣ ಎಂದು ‘ಗಂಗೋತ್ರಿ ಮಂದಿರ್ ಸಮಿತಿ’ ಹೇಳಿದೆ.</p>.<p>‘ದೇವಸ್ಥಾನಂ ಮಂಡಳಿ’ಯನ್ನು ವಿಸರ್ಜಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿರುವುದೇ ಅರ್ಚಕರ ಶಾಪಕ್ಕೆ ಕಾರಣ. ಮಂಡಳಿಯನ್ನು ವಿಸರ್ಜಿಸದಿದ್ದಲ್ಲಿ ಮುಂದಿನ ವರ್ಷ ಬಿಜೆಪಿಗೆ ಮರಳಿ ಅಧಿಕಾರ ದೊರೆಯದು ಎಂದು ಸಮಿತಿಯ ಜಂಟಿ ಕಾರ್ಯದರ್ಶಿ ರಾಜೇಶ್ ಸೆಮ್ವಾಲ್ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/pushkar-singh-dhami-takes-oath-as-uttarakhand-cm-844961.html" target="_blank">ಉತ್ತರಾಖಂಡ: ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಅಧಿಕಾರ ಸ್ವೀಕಾರ</a></p>.<p>ತ್ರಿವೇಂದ್ರ ಸಿಂಗ್ ರಾವತ್ ಮುಖ್ಯಮಂತ್ರಿಯಾಗಿದ್ದಾಗ ‘ದೇವಸ್ಥಾನಂ ಮಂಡಳಿ’ಯನ್ನು ರಚಿಲಾಗಿತ್ತು. ಉತ್ತರಾಖಂಡದ 51 ದೇಗುಲಗಳು ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿವೆ.</p>.<p>‘ದೇವಸ್ಥಾನಂ ಮಂಡಳಿ’ ರಚನೆಯು ತಮ್ಮ ಹಕ್ಕುಗಳ ಮೇಲಿನ ಅತಿಕ್ರಮಣ ಎಂದು ಭಾವಿಸಿರುವ ಗಂಗೋತ್ರಿ ಮತ್ತು ಯಮುನೋತ್ರಿ ದೇಗುಲಗಳ ಅರ್ಚಕರು ಮಂಡಳಿಯನ್ನು ವಿಸರ್ಜಿಸಬೇಕೆಂದು ಕಳೆದ ಹಲವು ವಾರಗಳಿಂದ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.</p>.<p>‘ಅರ್ಚಕರ ಶಾಪದಿಂದಾಗಿ ಬಿಜೆಪಿ ಸರ್ಕಾರವು ನಾಲ್ಕೂವರೆ ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಕಾಣುವಂತಾಗಿದೆ. ಈ ಅನುಭವದಿಂದ ಪಾಠ ಕಲಿತು ನೂತನ ಮುಖ್ಯಮಂತ್ರಿಗಳು ಮಂಡಳಿಯನ್ನು ವಿಸರ್ಜಿಸದಿದ್ದರೆ ಬಿಜೆಪಿಗೆ 2022ರಲ್ಲಿ ಮರಳಿ ಅಧಿಕಾರ ದೊರೆಯದು’ ಎಂದು ರಾಜೇಶ್ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/rawat-meets-nadda-again-amid-growing-buzz-of-another-change-of-guard-in-uttarakhand-844456.html" itemprop="url">ಉತ್ತರಾಖಂಡ: ಮತ್ತೆ ಗರಿಗೆದರಿದ ನಾಯಕತ್ವ ಬದಲಾವಣೆ</a></p>.<p>ರಾಜ್ಯ ವಿಧಾನಸಭೆಗೆ ನಿಗದಿತ ಅವಧಿಯಲ್ಲಿ ಶಾಸಕರಾಗಿ ಆಯ್ಕೆಯಾಗುವ ಸಾಧ್ಯತೆ ಇಲ್ಲದ ಕಾರಣ ಇತ್ತೀಚೆಗೆ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಅವರು ರಾಜೀನಾಮೆ ಸಲ್ಲಿಸಿದ್ದರು. ಬಳಿಕ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಭಾನುವಾರ ಅಧಿಕಾರ ಸ್ವೀಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉತ್ತರಕಾಶಿ:</strong> ಉತ್ತರಾಖಂಡದಲ್ಲಿ ಬಿಜೆಪಿಯು ಎರಡು ಬಾರಿ ಮುಖ್ಯಮಂತ್ರಿ ಬದಲಾವಣೆ ಮಾಡುವಂತಾಗಲು ಅರ್ಚಕರ ಶಾಪ ಕಾರಣ ಎಂದು ‘ಗಂಗೋತ್ರಿ ಮಂದಿರ್ ಸಮಿತಿ’ ಹೇಳಿದೆ.</p>.<p>‘ದೇವಸ್ಥಾನಂ ಮಂಡಳಿ’ಯನ್ನು ವಿಸರ್ಜಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿರುವುದೇ ಅರ್ಚಕರ ಶಾಪಕ್ಕೆ ಕಾರಣ. ಮಂಡಳಿಯನ್ನು ವಿಸರ್ಜಿಸದಿದ್ದಲ್ಲಿ ಮುಂದಿನ ವರ್ಷ ಬಿಜೆಪಿಗೆ ಮರಳಿ ಅಧಿಕಾರ ದೊರೆಯದು ಎಂದು ಸಮಿತಿಯ ಜಂಟಿ ಕಾರ್ಯದರ್ಶಿ ರಾಜೇಶ್ ಸೆಮ್ವಾಲ್ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/pushkar-singh-dhami-takes-oath-as-uttarakhand-cm-844961.html" target="_blank">ಉತ್ತರಾಖಂಡ: ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಅಧಿಕಾರ ಸ್ವೀಕಾರ</a></p>.<p>ತ್ರಿವೇಂದ್ರ ಸಿಂಗ್ ರಾವತ್ ಮುಖ್ಯಮಂತ್ರಿಯಾಗಿದ್ದಾಗ ‘ದೇವಸ್ಥಾನಂ ಮಂಡಳಿ’ಯನ್ನು ರಚಿಲಾಗಿತ್ತು. ಉತ್ತರಾಖಂಡದ 51 ದೇಗುಲಗಳು ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿವೆ.</p>.<p>‘ದೇವಸ್ಥಾನಂ ಮಂಡಳಿ’ ರಚನೆಯು ತಮ್ಮ ಹಕ್ಕುಗಳ ಮೇಲಿನ ಅತಿಕ್ರಮಣ ಎಂದು ಭಾವಿಸಿರುವ ಗಂಗೋತ್ರಿ ಮತ್ತು ಯಮುನೋತ್ರಿ ದೇಗುಲಗಳ ಅರ್ಚಕರು ಮಂಡಳಿಯನ್ನು ವಿಸರ್ಜಿಸಬೇಕೆಂದು ಕಳೆದ ಹಲವು ವಾರಗಳಿಂದ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.</p>.<p>‘ಅರ್ಚಕರ ಶಾಪದಿಂದಾಗಿ ಬಿಜೆಪಿ ಸರ್ಕಾರವು ನಾಲ್ಕೂವರೆ ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಕಾಣುವಂತಾಗಿದೆ. ಈ ಅನುಭವದಿಂದ ಪಾಠ ಕಲಿತು ನೂತನ ಮುಖ್ಯಮಂತ್ರಿಗಳು ಮಂಡಳಿಯನ್ನು ವಿಸರ್ಜಿಸದಿದ್ದರೆ ಬಿಜೆಪಿಗೆ 2022ರಲ್ಲಿ ಮರಳಿ ಅಧಿಕಾರ ದೊರೆಯದು’ ಎಂದು ರಾಜೇಶ್ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/rawat-meets-nadda-again-amid-growing-buzz-of-another-change-of-guard-in-uttarakhand-844456.html" itemprop="url">ಉತ್ತರಾಖಂಡ: ಮತ್ತೆ ಗರಿಗೆದರಿದ ನಾಯಕತ್ವ ಬದಲಾವಣೆ</a></p>.<p>ರಾಜ್ಯ ವಿಧಾನಸಭೆಗೆ ನಿಗದಿತ ಅವಧಿಯಲ್ಲಿ ಶಾಸಕರಾಗಿ ಆಯ್ಕೆಯಾಗುವ ಸಾಧ್ಯತೆ ಇಲ್ಲದ ಕಾರಣ ಇತ್ತೀಚೆಗೆ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಅವರು ರಾಜೀನಾಮೆ ಸಲ್ಲಿಸಿದ್ದರು. ಬಳಿಕ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಭಾನುವಾರ ಅಧಿಕಾರ ಸ್ವೀಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>