ಅನಂತನಾಗ್ ಜಿಲ್ಲೆಯ ಖಾಜಿಗುಂಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರಿ ಪಂಡಿತ ಉದ್ಯೋಗಿಗಳ ಪಟ್ಟಿ ಸೋರಿಕೆಯಾಗಿರುವುದು ದುರದೃಷ್ಟಕರ. ಕೇಂದ್ರದಲ್ಲಿ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಆಡಳಿತವಿದ್ದರೂ ಕಾಶ್ಮೀರಿ ಪಂಡಿತರ ಸಮಸ್ಯೆ ಬಗೆಹರಿದಿಲ್ಲ. ಒಂದು ಕಡೆ ಕಾಶ್ಮೀರಿ ಪಂಡಿತರಿಗೆ ಕೆಲಸಕ್ಕೆ ಹಾಜರಾಗುವಂತೆ ಕೇಳುತ್ತಿದ್ದರೆ, ಮತ್ತೊಂದೆಡೆ ಅವರ ವಿವರ ಸೋರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.