ರೈತ ವಿರೋಧಿ ಮಸೂದೆಗಳನ್ನು ಕಾಂಗ್ರೆಸ್ ವಿರೋಧಿಸಿದಾಗ, ಕಾಂಗ್ರೆಸ್ ರೈತರ ಹಿತಾಸಕ್ತಿಗೆ ಧಕ್ಕೆ ತರುತ್ತಿದೆ ಎಂದು ಬಿಜೆಪಿ ಆರೋಪಿಸಿತು. ಲೋಕಸಭೆಯಲ್ಲಿ ಮಸೂದೆಗಳನ್ನು ಅಂಗೀಕರಿಸುವ ಮುನ್ನ ಕಾಯ್ದೆಯನ್ನು ಪರಿಶೀಲನೆಗೆ ಒಳಪಡಿಸುವಂತೆ ಕೋರಿದಾಗ ಸಂಸತ್ತಿನಲ್ಲಿ ನಮ್ಮ ಸದಸ್ಯರನ್ನು ಅಮಾನತುಗೊಳಿಸಿದರು ಎಂದು ಚೌಧರಿ ಸರಣಿ ಟ್ವೀಟ್ ಮೂಲಕ ತಿಳಿಸಿದ್ದಾರೆ.