ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಕೇಂದ್ರ ಸರ್ಕಾರವು ಇಂಧನದ ಬೆಲೆಯನ್ನು ಲೀಟರ್ಗೆ ₹ 5 ಕಡಿಮೆ ಮಾಡಿದೆ. ₹50 ಕಡಿಮೆ ಮಾಡಬೇಕಾದರೆ ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು. ಸಾಲ ಮಾಡಿ ಜನರು ದೀಪಾವಳಿಯನ್ನು ಆಚರಿಸುವಂತಾಗಿದೆ. ಹಣದುಬ್ಬರದಿಂದಾಗಿ ಹಬ್ಬದ ವಾತಾವರಣವೂ ಇಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.