ನವದೆಹಲಿ: ಬಿಜೆಪಿ ನಾಯಕರು 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಪರ ಪ್ರಚಾರ ಮುಂದುವರಿಸಿದ್ದರೆ, ವಿರೋಧ ಪಕ್ಷಗಳ ಕೆಲವು ಮುಖಂಡರು ಕಿಡಿ ಕಾರುತ್ತಿದ್ದಾರೆ. ಆ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಕೇಜ್ರಿವಾಲ್ ಅವರನ್ನು ಬಿಜೆಪಿ ಮುಖಂಡ ಅಮಿತ್ ಮಾಳವಿಯಾ 'ಅರ್ಬನ್ ನಕ್ಸಲ್' ಎಂದು ಟೀಕಿಸಿದ್ದಾರೆ.
ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಪ್ರಸ್ತಾಪಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, '... ಸುಳ್ಳಿನ ಸಿನಿಮಾಗಳ ಪೋಸ್ಟರ್ ಸಹ ಹಾಕುವುದಿಲ್ಲ...' ಎಂದು ಗುರುವಾರ ವಿಧಾನಸಭೆಯಲ್ಲಿ ಹೇಳಿದ್ದರು.
'ಬಿಜೆಪಿಗರು ದೆಹಲಿಯಲ್ಲಿ ಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ಕೇಳುತ್ತಿದ್ದಾರೆ. ಆ ಚಿತ್ರದ ನಿರ್ಮಾಣ ಮಾಡಿರುವವರು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಬಹುದು. ಇದರಿಂದ ಸಿನಿಮಾವನ್ನು ಉಚಿತವಾಗೇ ನೋಡಲು ಸಾಧ್ಯವಾಗುತ್ತದೆ. ಎಲ್ಲರೂ ಚಿತ್ರವನ್ನು ವೀಕ್ಷಿಸಬಹುದು' ಎಂದು ಕೇಜ್ರಿವಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆ ಮಾತಿಗೆ ಇಡೀ ಸದನ ನಗೆಗಡಲಲ್ಲಿ ತೇಲಿತ್ತು.
ಕೇಜ್ರಿವಾಲ್ ಅವರು 2016 'ನಿಲ್ ಬಟ್ಟೆ ಸನ್ನಾಟಾ' ಮತ್ತು 2019ರಲ್ಲಿ 'ಸಾಂಡ್ ಕಿ ಆಂಖ್' ಸಿನಿಮಾಗಳಿಗೆ ದೆಹಲಿಯಲ್ಲಿ ತೆರಿಗೆ ವಿನಾಯಿತಿ ನೀಡಿದ್ದರ ಬಗ್ಗೆ ಪ್ರಕಟಿಸಿದ್ದ ಹಳೆಯ ಟ್ವೀಟ್ಗಳ ಸ್ಕ್ರೀನ್ಶಾಟ್ಗಳನ್ನು ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ. 'ಕೇಜ್ರಿವಾಲ್ ಎಕ್ಸ್ಪೋಸ್ಡ್' ಎಂಬ ಟ್ಯಾಗ್ ಟ್ವಿಟರ್ನಲ್ಲಿ ಟ್ರೆಂಡ್ ಆಗಿದೆ.
केजरीवाल ने इन फ़िल्मों को यू ट्यूब पर डालने की सलाह क्यों नहीं दी? दिल्ली में टैक्स फ़्री क्यों किया?
— Amit Malviya (@amitmalviya) March 24, 2022
और इनमें से किन किन के चरणों में केजरीवाल गिरा होगा?
क्योंकि कश्मीर फ़ाइल्ज़ हिंदुओं के नरसंहार की दास्तान दिखा रही है, इसलिए इस अर्बन नक्सल के पेट में दर्द हो रहा है? pic.twitter.com/ALOAkiRhWb
ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಮಾತನಾಡುತ್ತ ಕೇಜ್ರಿವಾಲ್ ನಗುತ್ತಿರುವ ವಿಡಿಯೊ ಅನ್ನು ಹಂಚಿಕೊಂಡಿರುವ ಅಮಿತ್ ಮಾಳವಿಯಾ, 'ಕೇಜ್ರಿವಾಲ್ ಅವರು ಹಿಂದೆ ಆ ಸಿನಿಮಾಗಳನ್ನು ಯುಟ್ಯೂಬ್ನಲ್ಲಿ ಹಾಕುವಂತೆ ಏಕೆ ಸಲಹೆ ನೀಡಲಿಲ್ಲ? ದೆಹಲಿಯಲ್ಲಿ ಏಕೆ ತೆರಿಗೆ ವಿನಾಯಿತಿ ನೀಡಲಾಯಿತು?....ಕಾಶ್ಮೀರ್ ಫೈಲ್ಸ್ ಹಿಂದೂಗಳ ಹತ್ಯೆಗಳ ಕುರಿತಾದುದು, ಹಾಗಾಗಿಯೇ ಈ ಅರ್ಬನ್ ನಕ್ಸಲ್ಗೆ ಹೊಟ್ಟೆಯಲ್ಲಿ ಉರಿ ಕಾಣಿಸಿಕೊಂಡಿದೆ' ಎಂದು ಮೂದಲಿಸಿದ್ದಾರೆ.
Only an inhuman, cruel and depraved mind can laugh at and deny the genocide of Kashmiri Hindus. Kejriwal has ripped open the wounds of the Hindu community, who have been forced to live as refugees in their own country, for 32 long years, by calling #KashmirFiles a झूठी फ़िल्म… pic.twitter.com/63w2x9QKqq
— Amit Malviya (@amitmalviya) March 25, 2022
ಕೇಜ್ರಿವಾಲ್ ನಗುತ್ತಿರುವ ಚಿತ್ರವನ್ನು ಪ್ರಕಟಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, 'ಭಯೋತ್ಪಾದನೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಜೀವ ಕಳೆದುಕೊಂಡ ಜನರನ್ನು ನೋಡಿ ನಗುತ್ತಿದ್ದಾರೆ...ಮಕ್ಕಳನ್ನು ಕಳೆದುಕೊಂಡಿರುವ ತಾಯಂದಿರನ್ನು ನೋಡಿ ನಗುತ್ತಿದ್ದಾರೆ... ಪಾಲಕರನ್ನು ಕಳೆದುಕೊಂಡಿರುವ ಮಕ್ಕಳನ್ನು ನೋಡಿ ನಗುತ್ತಿದ್ದಾರೆ... ಹತ್ಯೆಗೀಡಾದ ಭದ್ರತಾ ಪಡೆಗಳ ಸಿಬ್ಬಂದಿಯನ್ನು ಕಂಡು... ತುಂಡರಿಸಿದ ಮಹಿಳೆಯನ್ನು ಕಂಡು....ಗುಂಡಿನ ದಾಳಿಗೆ ಬಲಿಯಾದ ಮಕ್ಕಳನ್ನು ಕಂಡು ನುಗುತ್ತಿದ್ದಾರೆ...ನಿರ್ಲಜ್ಜೆಯ ಕ್ರಾಂತಿಕಾರಿಗಳು...' ಎಂದು ಟ್ವೀಟಿಸಿದ್ದಾರೆ.
Never forget ..They are laughing people who lost their life in J & K due to terrorism.. laughing at mothers who lost their children ..Children who lost their parents..Security forces who were killed...women who were butchered ..children who were shot at ..Shameless anarchists. pic.twitter.com/ZH6fKWTSQn
— B L Santhosh (@blsanthosh) March 25, 2022
ಪ್ರಧಾನಿ ನರೇಂದ್ರ ಮೋದಿ, ಸಚಿವರು, ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಮುಖಂಡರು ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪರವಾಗಿ ಮಾತನಾಡಿದ್ದಾರೆ. ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳಲ್ಲಿ ಆ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.
'ಬಿಜೆಪಿಯವರು ಸಿನಿಮಾದ ಪೋಸ್ಟರ್ಅನ್ನು ಅಂಟಿಸುತ್ತಿದ್ದಾರೆ. ಹಿಟ್ಲರ್ ಕೂಡ ತನ್ನ ಗುಲಾಮರಿಗೆ ಉದ್ಯೋಗವನ್ನು ನೀಡಿದ್ದ. ನಿಮಗೆ ಅವರೇನು (ಮೋದಿ) ಕೊಟ್ಟಿದ್ದಾರೆ? ಏನೇ ಆದರೂ ಕೇಜ್ರಿವಾಲ್ ನಿಮಗಾಗಿ ಕೆಲಸ ಮಾಡಲು ಸಿದ್ಧ... ' ಎಂದು ಕೇಜ್ರಿವಾಲ್ ಹೇಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.