ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಾಯಕ ಏಕನಾಥ್‌ ಖಾಡ್ಸೆ ಎನ್‌ಸಿಪಿ ಸೇರಲಿದ್ದಾರೆ: ಜಯಂತ್‌ ಪಾಟೀಲ್‌

Last Updated 21 ಅಕ್ಟೋಬರ್ 2020, 10:51 IST
ಅಕ್ಷರ ಗಾತ್ರ

ಮುಂಬೈ: ಹಿರಿಯ ಬಿಜೆಪಿ ನಾಯಕ ಏಕನಾಥ್‌ ಖಾಡ್ಸೆ ಅವರು ಶುಕ್ರವಾರ ಎನ್‌ಸಿಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಮಹಾರಾಷ್ಟ್ರದ ಎನ್‌ಸಿಪಿ ಮುಖ್ಯಸ್ಥ ಜಯಂತ್‌ ಪಾಟೀಲ್‌ ಅವರು ಬುಧವಾರ ತಿಳಿಸಿದರು.

ಏಕನಾಥ್‌ ಅವರು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಎನ್‌ಸಿಪಿಗೆ ಸೇರಲಿದ್ದಾರೆ. ಇದರಿಂದ ಎನ್‌ಸಿಪಿ ಇನ್ನಷ್ಟು ಬಲಿಷ್ಠಗೊಳಲಿದೆ ಎಂದು ಅವರು ಹೇಳಿದರು.

2016ರಲ್ಲಿ ಅವರ ಮೇಲೆ ಭ್ರಷ್ಟಚಾರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರು ಬಿಜೆಪಿ ತೊರೆದು ಎನ್‌ಸಿ‍ಪಿಗೆ ಸೇರ್ಪಡೆಯಾಗುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT