ಮುಂಬೈ: ಹಿರಿಯ ಬಿಜೆಪಿ ನಾಯಕ ಏಕನಾಥ್ ಖಾಡ್ಸೆ ಅವರು ಶುಕ್ರವಾರ ಎನ್ಸಿಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಮಹಾರಾಷ್ಟ್ರದ ಎನ್ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಅವರು ಬುಧವಾರ ತಿಳಿಸಿದರು.
ಏಕನಾಥ್ ಅವರು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಎನ್ಸಿಪಿಗೆ ಸೇರಲಿದ್ದಾರೆ. ಇದರಿಂದ ಎನ್ಸಿಪಿ ಇನ್ನಷ್ಟು ಬಲಿಷ್ಠಗೊಳಲಿದೆ ಎಂದು ಅವರು ಹೇಳಿದರು.
2016ರಲ್ಲಿ ಅವರ ಮೇಲೆ ಭ್ರಷ್ಟಚಾರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರು ಬಿಜೆಪಿ ತೊರೆದು ಎನ್ಸಿಪಿಗೆ ಸೇರ್ಪಡೆಯಾಗುತ್ತಿದ್ದಾರೆ.