ಈ ಸಂಬಂಧ ಟ್ವೀಟ್ ಮಾಡಿರುವ ಕಿರೀಟ್, ‘ಧನಂಜಯ್ ಮುಂಡೆ ವಿರುದ್ಧ ಮಾತನಾಡಿದರೆ ಶೂಟ್ ಮಾಡುತ್ತೇವೆ ಎಂದು ಎನ್ಸಿಪಿಯ ಆರು ನಾಯಕರು ಬೆದರಿಕೆಯೊಡ್ಡಿದ್ದಾರೆ. ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ. ಧನಂಜಯ್ ಮುಂಡೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದ್ದಾರೆ. ಮಾತ್ರವಲ್ಲದೆ ಮುಂಡೆ ಅವರು ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ತಮ್ಮ ಮಕ್ಕಳ ಬಗ್ಗೆ ಮಾಹಿತಿ ನೀಡಿರಲಿಲ್ಲ ಎಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.