ಕಥಿಹಾರ್: ಬಿಹಾರದ ಕಥಿಹಾರ್ ಜಿಲ್ಲೆಯ ತೇಲ್ತಾ ಪ್ರದೇಶದಲ್ಲಿ ಬಿಜೆಪಿ ಮುಖಂಡ ಸಂಜೀವ್ ಮಿಶ್ರಾ ಎಂಬುವವರನ್ನು ಅವರ ಮನೆಯ ಬಳಿಯೇ ದುಷ್ಕರ್ಮಿಗಳು ಸೋಮವಾರ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಪರಿಷದ್ ಮಾಜಿ ಸದಸ್ಯ ಸಂಜೀವ್ ಮಿಶ್ರಾ ಅವರು ತಮ್ಮ ಮನೆಯ ಮುಂಭಾಗದಲ್ಲಿ ಜನರೊಂದಿಗೆ ಮಾತನಾಡುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದೂ ವಿವರಿಸಿದ್ದಾರೆ.