ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಅವರು, ‘ಬಿಜೆಪಿಗೆ ಸೇರ್ಪಡೆಯಾಗುವುದಕ್ಕೂ ಮುನ್ನ ಕಂಡಿದ್ದ ಕನಸುಗಳು ನುಚ್ಚು ನೂರಾಗಿವೆ. ಆ ಹಿನ್ನೆಲೆಯಲ್ಲಿ ಸುವೇಂದು ಅಧಿಕಾರಿ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ಅವರು ಇತರ ಮುಖಂಡರೊಂದಿಗೆ ಟಿಎಂಸಿಗೆ ಮರಳಲು ಬಯಸಿದ್ದಾರೆ ಎಂಬ ಮಾಹಿತಿ ನಮಗೆ ಇದೆ’ ಎಂದು ಘೋಷ್ ಹೇಳಿದ್ದಾರೆ.