‘ಪಂಜಾಬ್ನ 11 ನಾಯಕರನ್ನು ಒಳಗೊಂಡ ನಿಯೋಗವು ಮೋದಿ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿತು. ಈ ವೇಳೆ ಗುರು ನಾನಕ್ ದೇವ್ ಅವರ ಭಕ್ತರ ಭಾವನೆಗಳನ್ನು ಪರಿಗಣಿಸುವಂತೆ ಅವರಲ್ಲಿ ಮನವಿ ಮಾಡಲಾಯಿತು. ಈ ಬಗ್ಗೆ ಚಿಂತನೆ ಚಿಂತನೆ ನಡೆಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದರು’ ಎಂದು ಪಂಜಾಬ್ನ ಬಿಜೆಪಿ ಘಟಕದ ಅಧ್ಯಕ್ಷ ಅಶ್ವಾನಿ ಶರ್ಮಾ ಅವರು ಪಿಟಿಐಗೆ ತಿಳಿಸಿದರು.