<p class="title"><strong>ಲಖನೌ (ಪಿಟಿಐ):</strong> ಉತ್ತರ ಪ್ರದೇಶದಲ್ಲಿ ಪಕ್ಷದ ಕಾರ್ಯಚಟುವಟಿಕೆ ಪ್ರಗತಿ ಪರಿಶೀಲಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಮತ್ತು ರಾಜ್ಯ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಎರಡು ದಿನಗಳ ಭೇಟಿಗಾಗಿ ಸೋಮವಾರ ಇಲ್ಲಿಗೆ ಆಗಮಿಸಲಿದ್ದಾರೆ.</p>.<p class="title">ಇದು, ಈ ತಿಂಗಳಲ್ಲಿ ರಾಜ್ಯಕ್ಕೆ ಈ ಮುಖಂಡರ ಎರಡನೇ ಭೇಟಿಯಾಗಲಿದೆ. ರಾಜ್ಯದಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆಗೆ ಪಕ್ಷ ಸಜ್ಜುಗೊಳಿಸುವುದು ಭೇಟಿಯ ಉದ್ದೇಶ ಎನ್ನಲಾಗಿದೆ. ಈ ಹಿಂದಿನ ಭೇಟಿಯಲ್ಲಿ ರಾಜ್ಯ ಉಸ್ತುವಾರಿ ಸಿಂಗ್ ಅವರು, ‘ರಾಜ್ಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬದಲಾವಣೆ ಸಾಧ್ಯತೆ ಇಲ್ಲ’ ಎಂದು ತಿಳಿಸಿದ್ದರು.</p>.<p>ಸಿಂಗ್ ಅವರ ಆಪ್ತರ ಪ್ರಕಾರ, ಉಭಯ ಮುಖಂಡರು ಎರಡು ದಿನದ ಭೇಟಿಯಲ್ಲಿ ‘ಸೇವಾ ಹೀ ಸಂಘಟನ್’ ಸೇರಿದಂತೆ ರಾಜ್ಯದಲ್ಲಿ ಪಕ್ಷದ ವಿವಿಧ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸುವರು. ಇನ್ನೊಬ್ಬ ಮುಖಂಡರ ಪ್ರಕಾರ, ಈ ವರ್ಷದ ನವೆಂಬರ್ ವೇಳೆಗೆ ಪಕ್ಷ ಪೂರ್ಣಪ್ರಮಾಣದಲ್ಲಿ ಚುನಾವಣೆ ಕಾರ್ಯಚಟುವಟಿಕೆ ಆರಂಭಿಸಲಿದೆ.</p>.<p>ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯ ನಿರ್ವಹಣೆ ಕುರಿತಂತೆ ಬಿಜೆಪಿಯ ಕೆಲವು ಶಾಸಕರೇ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ, ಪ್ರಮುಖ ವಿರೋಧಪಕ್ಷಗಳಾದ ಎಸ್.ಪಿ., ಬಿಎಸ್ಪಿ., ಮತ್ತು ಕಾಂಗ್ರೆಸ್ ಪಕ್ಷಗಳು ಚುನಾವಣೆಯಲ್ಲಿ ನಿರ್ವಹಣೆ ವೈಫಲ್ಯವನ್ನೇ ಪ್ರಮುಖ ವಿಷಯವಾಗಿ ಬಿಂಬಿಸಲು ತೀರ್ಮಾನಿಸಿವೆ.</p>.<p>ವಿಧಾನಪರಿಷತ್ತಿನ ಸದಸ್ಯ,ಮಾಜಿ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಅವರನ್ನು ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಈಚೆಗಷ್ಟೇ ನೇಮಿಸಲಾಗಿದ್ದು, ಅದರ ಹಿಂದೆಯೇ ಇಬ್ಬರು ಮುಖಂಡರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.</p>.<p>ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದು, ಚುನಾವಣೆಗೆ ಮೊದಲೇ ಅವರು ಯೋಗಿ ಆದಿತ್ಯನಾಥ್ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಇಲ್ಲಿ ದಟ್ಟವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ (ಪಿಟಿಐ):</strong> ಉತ್ತರ ಪ್ರದೇಶದಲ್ಲಿ ಪಕ್ಷದ ಕಾರ್ಯಚಟುವಟಿಕೆ ಪ್ರಗತಿ ಪರಿಶೀಲಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಮತ್ತು ರಾಜ್ಯ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಎರಡು ದಿನಗಳ ಭೇಟಿಗಾಗಿ ಸೋಮವಾರ ಇಲ್ಲಿಗೆ ಆಗಮಿಸಲಿದ್ದಾರೆ.</p>.<p class="title">ಇದು, ಈ ತಿಂಗಳಲ್ಲಿ ರಾಜ್ಯಕ್ಕೆ ಈ ಮುಖಂಡರ ಎರಡನೇ ಭೇಟಿಯಾಗಲಿದೆ. ರಾಜ್ಯದಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆಗೆ ಪಕ್ಷ ಸಜ್ಜುಗೊಳಿಸುವುದು ಭೇಟಿಯ ಉದ್ದೇಶ ಎನ್ನಲಾಗಿದೆ. ಈ ಹಿಂದಿನ ಭೇಟಿಯಲ್ಲಿ ರಾಜ್ಯ ಉಸ್ತುವಾರಿ ಸಿಂಗ್ ಅವರು, ‘ರಾಜ್ಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬದಲಾವಣೆ ಸಾಧ್ಯತೆ ಇಲ್ಲ’ ಎಂದು ತಿಳಿಸಿದ್ದರು.</p>.<p>ಸಿಂಗ್ ಅವರ ಆಪ್ತರ ಪ್ರಕಾರ, ಉಭಯ ಮುಖಂಡರು ಎರಡು ದಿನದ ಭೇಟಿಯಲ್ಲಿ ‘ಸೇವಾ ಹೀ ಸಂಘಟನ್’ ಸೇರಿದಂತೆ ರಾಜ್ಯದಲ್ಲಿ ಪಕ್ಷದ ವಿವಿಧ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸುವರು. ಇನ್ನೊಬ್ಬ ಮುಖಂಡರ ಪ್ರಕಾರ, ಈ ವರ್ಷದ ನವೆಂಬರ್ ವೇಳೆಗೆ ಪಕ್ಷ ಪೂರ್ಣಪ್ರಮಾಣದಲ್ಲಿ ಚುನಾವಣೆ ಕಾರ್ಯಚಟುವಟಿಕೆ ಆರಂಭಿಸಲಿದೆ.</p>.<p>ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯ ನಿರ್ವಹಣೆ ಕುರಿತಂತೆ ಬಿಜೆಪಿಯ ಕೆಲವು ಶಾಸಕರೇ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ, ಪ್ರಮುಖ ವಿರೋಧಪಕ್ಷಗಳಾದ ಎಸ್.ಪಿ., ಬಿಎಸ್ಪಿ., ಮತ್ತು ಕಾಂಗ್ರೆಸ್ ಪಕ್ಷಗಳು ಚುನಾವಣೆಯಲ್ಲಿ ನಿರ್ವಹಣೆ ವೈಫಲ್ಯವನ್ನೇ ಪ್ರಮುಖ ವಿಷಯವಾಗಿ ಬಿಂಬಿಸಲು ತೀರ್ಮಾನಿಸಿವೆ.</p>.<p>ವಿಧಾನಪರಿಷತ್ತಿನ ಸದಸ್ಯ,ಮಾಜಿ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಅವರನ್ನು ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಈಚೆಗಷ್ಟೇ ನೇಮಿಸಲಾಗಿದ್ದು, ಅದರ ಹಿಂದೆಯೇ ಇಬ್ಬರು ಮುಖಂಡರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.</p>.<p>ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದು, ಚುನಾವಣೆಗೆ ಮೊದಲೇ ಅವರು ಯೋಗಿ ಆದಿತ್ಯನಾಥ್ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಇಲ್ಲಿ ದಟ್ಟವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>