‘ಜಾಫರ್, ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ಆತನ ಸುಳಿವು ನೀಡಿದವರಿಗೆ ₹50 ಸಾವಿರ ಬಹುಮಾನ ಘೋಷಣೆ ಮಾಡಲಾಗಿತ್ತು. ಆತ ಭರತ್ಪುರ ಗ್ರಾಮದಲ್ಲಿ ಇರುವ ಕುರಿತು ಮಾಹಿತಿ ಸಿಕ್ಕಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರ ತಂಡ ಉತ್ತರಾಖಂಡದ ಜಸ್ಪುರ್ಗೆ ತೆರಳಿತ್ತು. ಆದರೆ, ಗ್ರಾಮಸ್ಥರು ಪೊಲೀಸರನ್ನು ಹಿಡಿದು ಕೂಡಿಹಾಕಿದ್ದಾರೆ. ಜತೆಗೆ ಪೊಲೀಸರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡಿದ್ದಾರೆ ಎಂದು ಮೊರಾದಾಬಾದ್ನ ಹಿರಿಯ ಪೊಲೀಸ್ ಅಧಿಕಾರಿ ಶಲಭ್ ಮಾಥುರ್ ಹೇಳಿದ್ದಾರೆ.