<p class="title"><strong>ಪಟ್ನಾ:</strong> ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಜಯಗಳಿಸಲು ಆರ್ಜೆಡಿಯೇ ಕಾರಣ ಎಂದು ಎಐಎಂಐಎಂ ಮುಖಂಡ, ಹೈದರಾಬಾದ್ನ ಸಂಸದ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.</p>.<p class="title">‘ಬಿಜೆಪಿಗೆ ನೆರವಾಗುವ ಉದ್ದೇಶದಿಂದಲೇ ಬಿಹಾರ ವಿಧಾನಸಭೆಯ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ’ ಎಂಬ ಆರೋಪವನ್ನು ಅವರು ಅಲ್ಲಗಳೆದಿದ್ದಾರೆ.</p>.<p class="title">ಸಮಾಜವಾದಿ ಜನತಾದಳ (ಡಿ) ಸ್ಥಾಪಕ ದೇವೇಂದ್ರ ಪ್ರಸಾದ್ ಯಾದವ್ ಮತ್ತು ಒವೈಸಿ ಅವರು ಈಗ ಬಿಹಾರ ವಿಧಾನಸಭೆ ಚುನಾವಣೆಗಾಗಿ ಸಂಯುಕ್ತ ಪ್ರಜಾಸತ್ತಾತ್ಮಕ ಜಾತ್ಯತೀತ ರಂಗ (ಯುಡಿಎಸ್ಎ) ರಚಿಸಿಕೊಂಡಿದ್ದಾರೆ.</p>.<p class="title">ಕಾಂಗ್ರೆಸ್ ಧೋರಣೆಯನ್ನು ಟೀಕಿಸಿದ ಅವರು, ‘ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವು ಎಐಎಂಐಎಂ ಜೊತೆಗೆ ಕೈಜೋಡಿಸಿತ್ತು. ಚುನಾವಣೆಯ ಬಳಿಕ ಶಿವಸೇನೆ ಜೊತೆಗೆ ಕೈಜೋಡಿಸಿತ್ತು. ಕಾಂಗ್ರೆಸ್ ಮುಖಂಡರು ನಮಗೆ ಜಾತ್ಯತೀತ ಪಾಠ ಹೇಳುವ ಅಗತ್ಯವಿಲ್ಲ’ ಎಂದು ತರಾಟೆಗೆ ತೆಗೆದುಕೊಂಡರು.</p>.<p>ಆರ್ಜೆಡಿ ಪಕ್ಷದ ಮುಖಂಡರು ತಮ್ಮನ್ನು ‘ಜಾತ್ಯತೀತ ಮತಗಳ ವಿಭಜಕ’ ಎಂದು ಟೀಕಿಸಿರುವುದನ್ನು ತರಾಟೆಗೆ ತೆಗೆದುಕೊಂಡ ಅವರು, ಬಿಹಾರದಲ್ಲಿ ಆರ್ಜೆಡಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲಲು ತಮ್ಮ ಪಕ್ಷವೇ ಕಾರಣ ಎಂದು ಮರೆಯಬಾರದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪಟ್ನಾ:</strong> ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಜಯಗಳಿಸಲು ಆರ್ಜೆಡಿಯೇ ಕಾರಣ ಎಂದು ಎಐಎಂಐಎಂ ಮುಖಂಡ, ಹೈದರಾಬಾದ್ನ ಸಂಸದ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.</p>.<p class="title">‘ಬಿಜೆಪಿಗೆ ನೆರವಾಗುವ ಉದ್ದೇಶದಿಂದಲೇ ಬಿಹಾರ ವಿಧಾನಸಭೆಯ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ’ ಎಂಬ ಆರೋಪವನ್ನು ಅವರು ಅಲ್ಲಗಳೆದಿದ್ದಾರೆ.</p>.<p class="title">ಸಮಾಜವಾದಿ ಜನತಾದಳ (ಡಿ) ಸ್ಥಾಪಕ ದೇವೇಂದ್ರ ಪ್ರಸಾದ್ ಯಾದವ್ ಮತ್ತು ಒವೈಸಿ ಅವರು ಈಗ ಬಿಹಾರ ವಿಧಾನಸಭೆ ಚುನಾವಣೆಗಾಗಿ ಸಂಯುಕ್ತ ಪ್ರಜಾಸತ್ತಾತ್ಮಕ ಜಾತ್ಯತೀತ ರಂಗ (ಯುಡಿಎಸ್ಎ) ರಚಿಸಿಕೊಂಡಿದ್ದಾರೆ.</p>.<p class="title">ಕಾಂಗ್ರೆಸ್ ಧೋರಣೆಯನ್ನು ಟೀಕಿಸಿದ ಅವರು, ‘ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವು ಎಐಎಂಐಎಂ ಜೊತೆಗೆ ಕೈಜೋಡಿಸಿತ್ತು. ಚುನಾವಣೆಯ ಬಳಿಕ ಶಿವಸೇನೆ ಜೊತೆಗೆ ಕೈಜೋಡಿಸಿತ್ತು. ಕಾಂಗ್ರೆಸ್ ಮುಖಂಡರು ನಮಗೆ ಜಾತ್ಯತೀತ ಪಾಠ ಹೇಳುವ ಅಗತ್ಯವಿಲ್ಲ’ ಎಂದು ತರಾಟೆಗೆ ತೆಗೆದುಕೊಂಡರು.</p>.<p>ಆರ್ಜೆಡಿ ಪಕ್ಷದ ಮುಖಂಡರು ತಮ್ಮನ್ನು ‘ಜಾತ್ಯತೀತ ಮತಗಳ ವಿಭಜಕ’ ಎಂದು ಟೀಕಿಸಿರುವುದನ್ನು ತರಾಟೆಗೆ ತೆಗೆದುಕೊಂಡ ಅವರು, ಬಿಹಾರದಲ್ಲಿ ಆರ್ಜೆಡಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲಲು ತಮ್ಮ ಪಕ್ಷವೇ ಕಾರಣ ಎಂದು ಮರೆಯಬಾರದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>