ಎರಡೂವರೆ ದಶಕಗಳ ಕಾಲ ಜೊತೆಗಿದ್ದು,ಎನ್ಡಿಎ ಮೈತ್ರಿಕೂಟದಿಂದ ಶಿರೋಮಣಿ ಅಕಾಲಿ ದಳವು(ಎಸ್ಎಡಿ) ಹೊರನಡೆದಿದೆ. ಇದು ಮೋದಿ ನೇತೃತ್ವದ ಸರ್ಕಾರಕ್ಕೆ ಹೆಚ್ಚಿನ ಪರಿಣಾಮ ಬೀರದೇ ಇದ್ದರೂ, ಪಂಜಾಬ್ನಲ್ಲಿ ಬಿಜೆಪಿಗೆ ರಾಜಕೀಯ ನಿರ್ವಾತ ಸೃಷ್ಟಿಯಾಗಲಿದೆ. ಪಂಜಾಬ್ನಲ್ಲಿ ಎಸ್ಎಡಿ ನಾಯಕ ಸುಖ್ಬೀರ್ ಸಿಂಗ್ ಬಾದಲ್ ವಿರುದ್ಧವಿರುವ ಅಕಾಲಿಗಳನ್ನು ಒಗ್ಗೂಡಿಸಿ ಪ್ರತ್ಯೇಕ ಪಕ್ಷ ರಚನೆಗೆ ಬಿಜೆಪಿ ಪ್ರಯತ್ನಿಸಬಹುದು ಎಂದು ರಾಜಕೀಯ ವಿಶ್ಲೇಷಕರು ವಿಶ್ಲೇಷಿಸಿದ್ದಾರೆ. ಆದರೆ,ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಕೇಂದ್ರದ ಮಸೂದೆಗಳನ್ನು ವಿರೋಧಿಸಿ ಪಂಜಾಬ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಬಿಜೆಪಿಯ ಪ್ರಯತ್ನಕ್ಕೆ ಅಡ್ಡಿಯಾಗಲಿವೆ ಎನ್ನಲಾಗಿದೆ.