<p><strong>ಕೊಲ್ಕತ್ತಾ:</strong> ಪಶ್ಚಿಮ ಬಂಗಾಳ ಸಚಿವಾಲಯ 'ನಬನ್ನಾ'ದಹೊರಭಾಗ ನೂರಾರು ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ಸಂಘರ್ಷಕ್ಕಿಳಿದರು. ಗಲಭೆ ನಿಯಂತ್ರಣ ಸಮವಸ್ತ್ರ ತೊಟ್ಟಿದ್ದ ಪೊಲೀಸರು ಅಶ್ರುವಾಯು ಶೆಲ್ ಮತ್ತು ವಾಟರ್ ಕೆನನ್ಗಳನ್ನು ಬಳಸಿ ಗುಂಪು ಚದುರಿಸಲು ಯತ್ನಿಸಿದರು.</p>.<p>'ಪೊಲೀಸರು ಬಿಜೆಪಿ ಕಾರ್ಯಕರ್ತರನ್ನೇ ಗುರಿಯಾಗಿಸಿಕೊಂಡು ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಕಲ್ಲುತೂರಾಟದಲ್ಲಿ ನಮ್ಮ ಕಾರ್ಯಕರ್ತರು ಪಾಲ್ಗೊಂಡಿಲ್ಲ' ಎಂದು ಬಿಜೆಪಿ ನಾಯಕ ಲೋಕೆತ್ ಚಟರ್ಜಿ ಆಕ್ರೋಶ ವ್ಯಕ್ತಪಡಿಸಿದರು.</p>.<p>'ಜನರು ಗುಂಪುಸೇರುವಂತಿಲ್ಲ' ಎಂದು ಸೂಚಿಸಿದ್ದ ಪಶ್ಚಿಮ ಬಂಗಾಳ ಸರ್ಕಾರವುಬಿಜೆಪಿ ಆಯೋಜಿಸಿದ್ದ 'ನಬನ್ನ ಚಲೋ' ಪ್ರತಿಭಟನೆಗೆ ಅನುಮತಿ ನಿರಾಕರಿಸಿತ್ತು. ಬಿಜೆಪಿ ಯುವ ಘಟಕದ ಮುಖ್ಯಸ್ಥ ತೇಜಸ್ವಿ ಸೂರ್ಯ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲೆಂದು ಕೊಲ್ಕತ್ತಾಗೆ ಬಂದಿದ್ದರು. ಇದು ಕೊಲ್ಕತ್ತಾದಲ್ಲಿ ಬಿಜೆಪಿಯ ಶಕ್ತಿಪ್ರದರ್ಶನ ಎಂದೇ ವಿಶ್ಲೇಷಿಸಲಾಗಿತ್ತು.</p>.<p>ಸ್ಯಾನಿಟೈಸೇಶನ್ಗಾಗಿಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಇಂದಿನಿಂದ ಎರಡು ದಿನಗಳ ಅವಧಿಗೆ ಮುಚ್ಚಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ. ಬಿಜೆಪಿ ಬಗ್ಗೆ ಮಮತಾ ಬ್ಯಾನರ್ಜಿಗೆ ಎಷ್ಟು ಭಯವಿದೆ ಎಂಬುದನ್ನು ಇದು ತೋರಿಸುತ್ತದೆ ಎಂದು ಬಿಜೆಪಿ ಹೇಳಿದೆ.</p>.<p><strong>ಕೊರೊನಾ ಭೀತಿ ಮಧ್ಯೆ ರಾಜಕೀಯ ಸಂಘರ್ಷ</strong></p>.<p>ಪಶ್ಚಿಮ ಬಂಗಾಳದಲ್ಲಿನಿನ್ನೆಯಷ್ಟೇ ಒಂದು ದಿನದಲ್ಲಿ ಅತಿಹೆಚ್ಚು ಸಂಖ್ಯೆಯ (3,455) ಸೋಂಕು ಪ್ರಕರಣಗಳು ವರದಿಯಾಗಿವೆ. ಇದು ಈವರೆಗಿನ ದಾಖಲೆ.</p>.<p>ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಎರಡೂ ಪಕ್ಷಗಳ ನಡುವಣ ರಾಜಕೀಯ ಸಮರ ತಾರಕಕ್ಕೇರಿದೆ. 'ಬಿಜೆಪಿ ಕಾರ್ಯಕರ್ತರು ಸೋಂಕು ತಡೆ ಸೂಚನೆಗಳನ್ನು ಪಾಲಿಸುತ್ತಿಲ್ಲ' ಎಂದು ಟಿಎಂಸಿ ಆರೋಪಿಸಿದೆ. 'ನಮಗೊಂದು ನಿಯಮ, ಅವರಿಗೊಂದು ನಿಯಮವೇ' ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯಪ್ರಶ್ನಿಸಿದ್ದಾರೆ.</p>.<p>ಕಳೆದ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 18 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ವಿಧಾನಸಭಾ ಚುನಾವಣೆಯು ಸನಿಹದಲ್ಲಿರುವ ರಾಜ್ಯದಲ್ಲಿ ಬಿಜೆಪಿ ಅನಧಿಕೃತವಾಗಿ ಪ್ರಚಾರ ಈಗಾಗಲೇ ಆರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಕತ್ತಾ:</strong> ಪಶ್ಚಿಮ ಬಂಗಾಳ ಸಚಿವಾಲಯ 'ನಬನ್ನಾ'ದಹೊರಭಾಗ ನೂರಾರು ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ಸಂಘರ್ಷಕ್ಕಿಳಿದರು. ಗಲಭೆ ನಿಯಂತ್ರಣ ಸಮವಸ್ತ್ರ ತೊಟ್ಟಿದ್ದ ಪೊಲೀಸರು ಅಶ್ರುವಾಯು ಶೆಲ್ ಮತ್ತು ವಾಟರ್ ಕೆನನ್ಗಳನ್ನು ಬಳಸಿ ಗುಂಪು ಚದುರಿಸಲು ಯತ್ನಿಸಿದರು.</p>.<p>'ಪೊಲೀಸರು ಬಿಜೆಪಿ ಕಾರ್ಯಕರ್ತರನ್ನೇ ಗುರಿಯಾಗಿಸಿಕೊಂಡು ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಕಲ್ಲುತೂರಾಟದಲ್ಲಿ ನಮ್ಮ ಕಾರ್ಯಕರ್ತರು ಪಾಲ್ಗೊಂಡಿಲ್ಲ' ಎಂದು ಬಿಜೆಪಿ ನಾಯಕ ಲೋಕೆತ್ ಚಟರ್ಜಿ ಆಕ್ರೋಶ ವ್ಯಕ್ತಪಡಿಸಿದರು.</p>.<p>'ಜನರು ಗುಂಪುಸೇರುವಂತಿಲ್ಲ' ಎಂದು ಸೂಚಿಸಿದ್ದ ಪಶ್ಚಿಮ ಬಂಗಾಳ ಸರ್ಕಾರವುಬಿಜೆಪಿ ಆಯೋಜಿಸಿದ್ದ 'ನಬನ್ನ ಚಲೋ' ಪ್ರತಿಭಟನೆಗೆ ಅನುಮತಿ ನಿರಾಕರಿಸಿತ್ತು. ಬಿಜೆಪಿ ಯುವ ಘಟಕದ ಮುಖ್ಯಸ್ಥ ತೇಜಸ್ವಿ ಸೂರ್ಯ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲೆಂದು ಕೊಲ್ಕತ್ತಾಗೆ ಬಂದಿದ್ದರು. ಇದು ಕೊಲ್ಕತ್ತಾದಲ್ಲಿ ಬಿಜೆಪಿಯ ಶಕ್ತಿಪ್ರದರ್ಶನ ಎಂದೇ ವಿಶ್ಲೇಷಿಸಲಾಗಿತ್ತು.</p>.<p>ಸ್ಯಾನಿಟೈಸೇಶನ್ಗಾಗಿಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಇಂದಿನಿಂದ ಎರಡು ದಿನಗಳ ಅವಧಿಗೆ ಮುಚ್ಚಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ. ಬಿಜೆಪಿ ಬಗ್ಗೆ ಮಮತಾ ಬ್ಯಾನರ್ಜಿಗೆ ಎಷ್ಟು ಭಯವಿದೆ ಎಂಬುದನ್ನು ಇದು ತೋರಿಸುತ್ತದೆ ಎಂದು ಬಿಜೆಪಿ ಹೇಳಿದೆ.</p>.<p><strong>ಕೊರೊನಾ ಭೀತಿ ಮಧ್ಯೆ ರಾಜಕೀಯ ಸಂಘರ್ಷ</strong></p>.<p>ಪಶ್ಚಿಮ ಬಂಗಾಳದಲ್ಲಿನಿನ್ನೆಯಷ್ಟೇ ಒಂದು ದಿನದಲ್ಲಿ ಅತಿಹೆಚ್ಚು ಸಂಖ್ಯೆಯ (3,455) ಸೋಂಕು ಪ್ರಕರಣಗಳು ವರದಿಯಾಗಿವೆ. ಇದು ಈವರೆಗಿನ ದಾಖಲೆ.</p>.<p>ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಎರಡೂ ಪಕ್ಷಗಳ ನಡುವಣ ರಾಜಕೀಯ ಸಮರ ತಾರಕಕ್ಕೇರಿದೆ. 'ಬಿಜೆಪಿ ಕಾರ್ಯಕರ್ತರು ಸೋಂಕು ತಡೆ ಸೂಚನೆಗಳನ್ನು ಪಾಲಿಸುತ್ತಿಲ್ಲ' ಎಂದು ಟಿಎಂಸಿ ಆರೋಪಿಸಿದೆ. 'ನಮಗೊಂದು ನಿಯಮ, ಅವರಿಗೊಂದು ನಿಯಮವೇ' ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯಪ್ರಶ್ನಿಸಿದ್ದಾರೆ.</p>.<p>ಕಳೆದ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 18 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ವಿಧಾನಸಭಾ ಚುನಾವಣೆಯು ಸನಿಹದಲ್ಲಿರುವ ರಾಜ್ಯದಲ್ಲಿ ಬಿಜೆಪಿ ಅನಧಿಕೃತವಾಗಿ ಪ್ರಚಾರ ಈಗಾಗಲೇ ಆರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>