<p><strong>ಲಖನೌ: </strong>ಉತ್ತರ ಪ್ರದೇಶದಲ್ಲಿ ಸಂಭಾವ್ಯ ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿ ನಿಲ್ಲುವ ನಿಟ್ಟಿನಲ್ಲಿ ಬಿಜೆಪಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ<br />ನೂರಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.</p>.<p>ಲಖನೌದಲ್ಲಿನ ರಾಜ್ಯ ಬಿಜೆಪಿಯ ಮೂಲಗಳ ಪ್ರಕಾರ, ಕೇಸರಿ ಪಕ್ಷವು ತಮ್ಮ ಕ್ಷೇತ್ರದಲ್ಲಿ ಸಕ್ರಿಯವಾಗಿಲ್ಲದ ಮತ್ತು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿರುವ 100ಕ್ಕೂ ಹೆಚ್ಚು ಹಾಲಿ ಶಾಸಕರನ್ನು ಮತ್ತೆ ಕಣಕ್ಕಿಳಿಸದಿರಲು ನಿರ್ಧರಿಸಿದೆ ಎಂದು ಗೊತ್ತಾಗಿದೆ.</p>.<p>ಇದರಲ್ಲಿ, ಎಪ್ಪತ್ತು ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿರುವವರು ಸೇರಿದ್ದಾರೆ’ ಎಂದು ಯುಪಿಯ ಹಿರಿಯ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.</p>.<p>ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಲು ವಿವಿಧ ಕ್ಷೇತ್ರಗಳಲ್ಲಿನ ಕಾರ್ಯಕರ್ತರ ಪ್ರತಿಕ್ರಿಯೆಯನ್ನು ಪಡೆಯಲು ಪಕ್ಷವು ಸಮೀಕ್ಷೆಯನ್ನು ಸಹ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<p>ಕೆಲವು ಬಿಜೆಪಿ ಶಾಸಕರು ರಾಜ್ಯ ಸರ್ಕಾರದ ವಿರುದ್ಧವೇ ಧ್ವನಿ ಎತ್ತುತಿದ್ದಾರೆ. ವಿಶೇಷವಾಗಿ ಕೋವಿಡ್ -19 ರ ಎರಡನೇ ಅಲೆಯ ಸಮಯದಲ್ಲಿ ದುರಾಡಳಿತದ ಬಗ್ಗೆ ಆರೋಪ ಮಾಡಿದ್ದಾರೆ. ಪ್ರಭಾವಿ 'ಬ್ರಾಹ್ಮಣ' ಸಮುದಾಯದಿಂದ ಬಂದಿರುವ ಕೆಲವು ಶಾಸಕರು ಸಹ ರಾಜ್ಯ ಸರ್ಕಾರವು ತಮ್ಮ ಸಮುದಾಯದ ಸದಸ್ಯರಿಗೆ 'ಕಿರುಕುಳ ನೀಡುತ್ತಿದೆ' ಎಂದು ಆರೋಪಿಸಿದ್ದರು.</p>.<p>ಅವರಲ್ಲಿ ಒಬ್ಬರಾದ ಸೀತಾಪುರ ಸದರ್ ವಿಧಾನಸಭಾ ಕ್ಷೇತ್ರದ ಶಾಸಕ ರಾಕೇಶ್ ರಾಥೋಡ್ ಅವರು ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದು, ಅವರು ಶೀಘ್ರದಲ್ಲೇ ಕೇಸರಿ ಪಕ್ಷವನ್ನು ತೊರೆದು ಎಸ್ಪಿ ಸೇರಬಹುದು ಎಂಬ ಊಹಾಪೋಹಗಳು ಎದ್ದಿವೆ.</p>.<p>ಈ ಹಿಂದೆ ಕೂಡ ಹಲವು ಬಿಜೆಪಿ ಶಾಸಕರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರನ್ನು ಬದಲಾಯಿಸಬೇಕೆಂಬ ಬೇಡಿಕೆಗಳು ಇದ್ದವು. ಆದರೆ, ಬಿಜೆಪಿ ಕೇಂದ್ರ ನಾಯಕತ್ವವು, ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಪಕ್ಷದ ಮುಖ ಎಂದು ಸ್ಪಷ್ಟಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಉತ್ತರ ಪ್ರದೇಶದಲ್ಲಿ ಸಂಭಾವ್ಯ ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿ ನಿಲ್ಲುವ ನಿಟ್ಟಿನಲ್ಲಿ ಬಿಜೆಪಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ<br />ನೂರಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.</p>.<p>ಲಖನೌದಲ್ಲಿನ ರಾಜ್ಯ ಬಿಜೆಪಿಯ ಮೂಲಗಳ ಪ್ರಕಾರ, ಕೇಸರಿ ಪಕ್ಷವು ತಮ್ಮ ಕ್ಷೇತ್ರದಲ್ಲಿ ಸಕ್ರಿಯವಾಗಿಲ್ಲದ ಮತ್ತು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿರುವ 100ಕ್ಕೂ ಹೆಚ್ಚು ಹಾಲಿ ಶಾಸಕರನ್ನು ಮತ್ತೆ ಕಣಕ್ಕಿಳಿಸದಿರಲು ನಿರ್ಧರಿಸಿದೆ ಎಂದು ಗೊತ್ತಾಗಿದೆ.</p>.<p>ಇದರಲ್ಲಿ, ಎಪ್ಪತ್ತು ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿರುವವರು ಸೇರಿದ್ದಾರೆ’ ಎಂದು ಯುಪಿಯ ಹಿರಿಯ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.</p>.<p>ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಲು ವಿವಿಧ ಕ್ಷೇತ್ರಗಳಲ್ಲಿನ ಕಾರ್ಯಕರ್ತರ ಪ್ರತಿಕ್ರಿಯೆಯನ್ನು ಪಡೆಯಲು ಪಕ್ಷವು ಸಮೀಕ್ಷೆಯನ್ನು ಸಹ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<p>ಕೆಲವು ಬಿಜೆಪಿ ಶಾಸಕರು ರಾಜ್ಯ ಸರ್ಕಾರದ ವಿರುದ್ಧವೇ ಧ್ವನಿ ಎತ್ತುತಿದ್ದಾರೆ. ವಿಶೇಷವಾಗಿ ಕೋವಿಡ್ -19 ರ ಎರಡನೇ ಅಲೆಯ ಸಮಯದಲ್ಲಿ ದುರಾಡಳಿತದ ಬಗ್ಗೆ ಆರೋಪ ಮಾಡಿದ್ದಾರೆ. ಪ್ರಭಾವಿ 'ಬ್ರಾಹ್ಮಣ' ಸಮುದಾಯದಿಂದ ಬಂದಿರುವ ಕೆಲವು ಶಾಸಕರು ಸಹ ರಾಜ್ಯ ಸರ್ಕಾರವು ತಮ್ಮ ಸಮುದಾಯದ ಸದಸ್ಯರಿಗೆ 'ಕಿರುಕುಳ ನೀಡುತ್ತಿದೆ' ಎಂದು ಆರೋಪಿಸಿದ್ದರು.</p>.<p>ಅವರಲ್ಲಿ ಒಬ್ಬರಾದ ಸೀತಾಪುರ ಸದರ್ ವಿಧಾನಸಭಾ ಕ್ಷೇತ್ರದ ಶಾಸಕ ರಾಕೇಶ್ ರಾಥೋಡ್ ಅವರು ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದು, ಅವರು ಶೀಘ್ರದಲ್ಲೇ ಕೇಸರಿ ಪಕ್ಷವನ್ನು ತೊರೆದು ಎಸ್ಪಿ ಸೇರಬಹುದು ಎಂಬ ಊಹಾಪೋಹಗಳು ಎದ್ದಿವೆ.</p>.<p>ಈ ಹಿಂದೆ ಕೂಡ ಹಲವು ಬಿಜೆಪಿ ಶಾಸಕರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರನ್ನು ಬದಲಾಯಿಸಬೇಕೆಂಬ ಬೇಡಿಕೆಗಳು ಇದ್ದವು. ಆದರೆ, ಬಿಜೆಪಿ ಕೇಂದ್ರ ನಾಯಕತ್ವವು, ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಪಕ್ಷದ ಮುಖ ಎಂದು ಸ್ಪಷ್ಟಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>