ಪ್ರತಿಭಟನೆ ಸ್ಥಳ ಬಿಟ್ಟು ಕದಲುವುದಿಲ್ಲ.
ರೈತರು ಪ್ರತಿಭಟನಾ ನಿರತ ಸ್ಥಳವನ್ನು ಬಿಟ್ಟು ಕದಲುವುದಿಲ್ಲ ಎಂದು ರಾಕೇಶ್ ಟಿಕಾಯತ್ ಪುನರುಚ್ಛರಿಸಿದರು. ನಾವು ನಮ್ಮ ಸಮಸ್ಯೆಗಳ ಬಗ್ಗೆ ಸರ್ಕಾರದೊಂದಿಗೆ ಮಾತನಾಡುತ್ತೇವೆ. ರೈತರಲ್ಲಿ ಸಂಯಮದಿಂದ ಇರಲು ಕೋರುತ್ತೇವೆ. ಸರ್ಕಾರದೊಂದಿಗೆ ನಮ್ಮ ಮಾತುಕತೆ ಮುಂದುವರಿಯಲಿದೆ ಎಂದು ಹೇಳಿದರು.