<p class="title"><strong>ಕೋಲ್ಕತ್ತ:</strong> ರಾಯ್ಗಂಜ್ನ ಬಿಜೆಪಿ ಶಾಸಕ ಕೃಷ್ಣ ಕಲ್ಯಾಣಿ ಅವರು ಬುಧವಾರ ತೃಣಮೂಲ ಕಾಂಗ್ರೆಸ್ ಸೇರ್ಪಡೆಗೊಂಡರು.</p>.<p class="title">ಕಲ್ಯಾಣಿ ಅವರು ಟಿಎಂಸಿ ಸೇರುತ್ತಿರುವ ಐದನೇ ಬಿಜೆಪಿ ಶಾಸಕರಾಗಿದ್ದಾರೆ. ಇದರಿಂದ ಬಿಜೆಪಿಗೆ ತೀವ್ರ ಹಿನ್ನಡೆಯಾದಂತಾಗಿದೆ.</p>.<p class="title">ಟಿಎಂಸಿಯ ಮಾಜಿ ಉತ್ತರ ದಿನಾಜ್ಪುರ ಜಿಲ್ಲಾ ಅಧ್ಯಕ್ಷರಾಗಿದ್ದ ಕಲ್ಯಾಣಿ ಅವರು ಕಳೆದ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರಿ ರಾಯ್ಗಂಜ್ನಿಂದ ಸ್ಪರ್ಧಿಸಿದ್ದರು.</p>.<p class="title">ಟಿಎಂಸಿ ಪ್ರಧಾನ ಕಾರ್ಯದರ್ಶಿ ಮತ್ತು ಹಿರಿಯ ರಾಜ್ಯ ಸಚಿವ ಪಾರ್ಥ ಚಟರ್ಜಿ ಅವರು ಕಲ್ಯಾಣಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.</p>.<p class="bodytext">‘ಯಾವುದೇ ಸ್ವಾಭಿಮಾನಿ ವ್ಯಕ್ತಿ ಬಿಜೆಪಿಯಲ್ಲಿ ಮುಕ್ತವಾಗಿ ಕೆಲಸ ಮಾಡಲು ಸಾಧ್ಯವಿಲ್ಲ’ ಎಂದು ಕಲ್ಯಾಣಿ ಅವರು ಇಲ್ಲಿಯ ಟಿಎಂಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p class="bodytext">ಏರುತ್ತಿರುವ ತೈಲ ಬೆಲೆಯನ್ನು ಪರಿಶೀಲಿಸಲು ಒಂದೇ ಒಂದು ಹೆಜ್ಜೆಯನ್ನು ಮುಂದಿಡದ ಕೇಂದ್ರದ ಜನ ವಿರೋಧಿ ನೀತಿಯಿಂದ ತಾನು ಅಸಮಾಧಾನಗೊಂಡಿದ್ದೇನೆ ಎಂದು ಅವರು ಹೇಳಿದರು.</p>.<p class="bodytext">‘ಶಾಸಕರಾಗಿ ಯಾರಾದರೂ ಉತ್ತಮ ಕೆಲಸ ಮಾಡಲು ಬಯಸಿದರೆ ಬಿಜೆಪಿಯಲ್ಲಿ ಹಾಗೆ ಮಾಡಲು ಬಿಡುವುದಿಲ್ಲ’ ಎಂದು ಆರೋಪಿಸಿದರು.</p>.<p class="bodytext">ಕಲ್ಯಾಣಿ ಅವರು ಈ ತಿಂಗಳ ಆರಂಭದಲ್ಲಿ ಬಿಜೆಪಿ ತೊರೆದಿದ್ದರು. ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೋಲ್ಕತ್ತ:</strong> ರಾಯ್ಗಂಜ್ನ ಬಿಜೆಪಿ ಶಾಸಕ ಕೃಷ್ಣ ಕಲ್ಯಾಣಿ ಅವರು ಬುಧವಾರ ತೃಣಮೂಲ ಕಾಂಗ್ರೆಸ್ ಸೇರ್ಪಡೆಗೊಂಡರು.</p>.<p class="title">ಕಲ್ಯಾಣಿ ಅವರು ಟಿಎಂಸಿ ಸೇರುತ್ತಿರುವ ಐದನೇ ಬಿಜೆಪಿ ಶಾಸಕರಾಗಿದ್ದಾರೆ. ಇದರಿಂದ ಬಿಜೆಪಿಗೆ ತೀವ್ರ ಹಿನ್ನಡೆಯಾದಂತಾಗಿದೆ.</p>.<p class="title">ಟಿಎಂಸಿಯ ಮಾಜಿ ಉತ್ತರ ದಿನಾಜ್ಪುರ ಜಿಲ್ಲಾ ಅಧ್ಯಕ್ಷರಾಗಿದ್ದ ಕಲ್ಯಾಣಿ ಅವರು ಕಳೆದ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರಿ ರಾಯ್ಗಂಜ್ನಿಂದ ಸ್ಪರ್ಧಿಸಿದ್ದರು.</p>.<p class="title">ಟಿಎಂಸಿ ಪ್ರಧಾನ ಕಾರ್ಯದರ್ಶಿ ಮತ್ತು ಹಿರಿಯ ರಾಜ್ಯ ಸಚಿವ ಪಾರ್ಥ ಚಟರ್ಜಿ ಅವರು ಕಲ್ಯಾಣಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.</p>.<p class="bodytext">‘ಯಾವುದೇ ಸ್ವಾಭಿಮಾನಿ ವ್ಯಕ್ತಿ ಬಿಜೆಪಿಯಲ್ಲಿ ಮುಕ್ತವಾಗಿ ಕೆಲಸ ಮಾಡಲು ಸಾಧ್ಯವಿಲ್ಲ’ ಎಂದು ಕಲ್ಯಾಣಿ ಅವರು ಇಲ್ಲಿಯ ಟಿಎಂಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p class="bodytext">ಏರುತ್ತಿರುವ ತೈಲ ಬೆಲೆಯನ್ನು ಪರಿಶೀಲಿಸಲು ಒಂದೇ ಒಂದು ಹೆಜ್ಜೆಯನ್ನು ಮುಂದಿಡದ ಕೇಂದ್ರದ ಜನ ವಿರೋಧಿ ನೀತಿಯಿಂದ ತಾನು ಅಸಮಾಧಾನಗೊಂಡಿದ್ದೇನೆ ಎಂದು ಅವರು ಹೇಳಿದರು.</p>.<p class="bodytext">‘ಶಾಸಕರಾಗಿ ಯಾರಾದರೂ ಉತ್ತಮ ಕೆಲಸ ಮಾಡಲು ಬಯಸಿದರೆ ಬಿಜೆಪಿಯಲ್ಲಿ ಹಾಗೆ ಮಾಡಲು ಬಿಡುವುದಿಲ್ಲ’ ಎಂದು ಆರೋಪಿಸಿದರು.</p>.<p class="bodytext">ಕಲ್ಯಾಣಿ ಅವರು ಈ ತಿಂಗಳ ಆರಂಭದಲ್ಲಿ ಬಿಜೆಪಿ ತೊರೆದಿದ್ದರು. ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>